ರಾಷ್ಟ್ರೀಯ

ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ; ರಾಹುಲ್ ಗಾಂಧಿ ಗಂಭೀರ ಆರೋಪ

ಒಡಿಶಾ: ನಿನ್ನೆ ( ಫೆಬ್ರವರಿ 7 ) ರಾಜ್ಯಸಭೆಯ ಸಂಸತ್‌ ಸದನದಲ್ಲಿ ಮಾತನಾಡಿದ್ದ ನರೇಂದ್ರ ಮೋದಿ ಈ ಹಿಂದಿನಿಂದಲೂ ಕಾಂಗ್ರೆಸ್‌ ಪಕ್ಷ ಒಬಿಸಿ ವಿರುದ್ಧವಾಗಿದೆ, ಎಲ್ಲಿಯೂ ಒಬಿಸಿಗೆ ಸರಿಯಾದ ಮೀಸಲಾತಿಯನ್ನು ನೀಡಿಲ್ಲ ಎಂದು ಆರೋಪಿಸಿದ್ದರು.

ಈ ಆರೋಪಕ್ಕೆ ಟಾಂಗ್‌ ನೀಡಲು ಯತ್ನಿಸಿರುವ ರಾಹುಲ್‌ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ ಎಂದು ಹೇಳಿಕೆ ನೀಡಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಒಡಿಶಾದಲ್ಲಿ ಭಾರತ್‌ ಜೋಡ್‌ ನ್ಯಾಯ್‌ ಯಾತ್ರೆಯ ಮೂರನೇ ದಿನದಂದು ಮಾತನಾಡಿದ ರಾಹುಲ್‌ ಗಾಂಧಿ ʼಪ್ರಧಾನಮಂತ್ರಿ ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ. ಗುಜರಾತ್‌ನಲ್ಲಿ ತೇಲಿ ಎಂಬ ಜಾತಿಯಲ್ಲಿ ಅವರು ಜನಿಸಿದರು. ಆ ಸಮುದಾಯಕ್ಕೆ 2000ರಲ್ಲಿ ಬಿಜೆಪಿ ಒಬಿಸಿ ಎಂಬ ಟ್ಯಾಗ್‌ ಅನ್ನು ನೀಡಿತು. ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ. ಅವರು ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ ಹಾಗೂ ಸಾಮಾನ್ಯ ಜಾತಿಯಲ್ಲಿ ಜನಿಸಿರುವ ಕಾರಣದಿಂದಲೇ ತಮ್ಮ ಸಂಪೂರ್ಣ ಜೀವನದಲ್ಲಿ ಜಾತಿಗಣತಿ ಮಾಡಲು ಬಿಡುವುದಿಲ್ಲ” ಎಂದು ಆರೋಪಿಸಿದರು.

andolana

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

1 hour ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

1 hour ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago