ಒಡಿಶಾ: ನಿನ್ನೆ ( ಫೆಬ್ರವರಿ 7 ) ರಾಜ್ಯಸಭೆಯ ಸಂಸತ್ ಸದನದಲ್ಲಿ ಮಾತನಾಡಿದ್ದ ನರೇಂದ್ರ ಮೋದಿ ಈ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷ ಒಬಿಸಿ ವಿರುದ್ಧವಾಗಿದೆ, ಎಲ್ಲಿಯೂ ಒಬಿಸಿಗೆ ಸರಿಯಾದ ಮೀಸಲಾತಿಯನ್ನು ನೀಡಿಲ್ಲ ಎಂದು ಆರೋಪಿಸಿದ್ದರು.
ಈ ಆರೋಪಕ್ಕೆ ಟಾಂಗ್ ನೀಡಲು ಯತ್ನಿಸಿರುವ ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ ಎಂದು ಹೇಳಿಕೆ ನೀಡಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಒಡಿಶಾದಲ್ಲಿ ಭಾರತ್ ಜೋಡ್ ನ್ಯಾಯ್ ಯಾತ್ರೆಯ ಮೂರನೇ ದಿನದಂದು ಮಾತನಾಡಿದ ರಾಹುಲ್ ಗಾಂಧಿ ʼಪ್ರಧಾನಮಂತ್ರಿ ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ. ಗುಜರಾತ್ನಲ್ಲಿ ತೇಲಿ ಎಂಬ ಜಾತಿಯಲ್ಲಿ ಅವರು ಜನಿಸಿದರು. ಆ ಸಮುದಾಯಕ್ಕೆ 2000ರಲ್ಲಿ ಬಿಜೆಪಿ ಒಬಿಸಿ ಎಂಬ ಟ್ಯಾಗ್ ಅನ್ನು ನೀಡಿತು. ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ. ಅವರು ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ ಹಾಗೂ ಸಾಮಾನ್ಯ ಜಾತಿಯಲ್ಲಿ ಜನಿಸಿರುವ ಕಾರಣದಿಂದಲೇ ತಮ್ಮ ಸಂಪೂರ್ಣ ಜೀವನದಲ್ಲಿ ಜಾತಿಗಣತಿ ಮಾಡಲು ಬಿಡುವುದಿಲ್ಲ” ಎಂದು ಆರೋಪಿಸಿದರು.
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…
ಬೆಂಗಳೂರಿನ ಯಶವಂತಪುರ, ಎಸ್ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…
ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್ಪ್ರೆಸ್ಗೆ ಅನುಮೋದನೆ…
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…