ಒಡಿಶಾ: ನಿನ್ನೆ ( ಫೆಬ್ರವರಿ 7 ) ರಾಜ್ಯಸಭೆಯ ಸಂಸತ್ ಸದನದಲ್ಲಿ ಮಾತನಾಡಿದ್ದ ನರೇಂದ್ರ ಮೋದಿ ಈ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷ ಒಬಿಸಿ ವಿರುದ್ಧವಾಗಿದೆ, ಎಲ್ಲಿಯೂ ಒಬಿಸಿಗೆ ಸರಿಯಾದ ಮೀಸಲಾತಿಯನ್ನು ನೀಡಿಲ್ಲ ಎಂದು ಆರೋಪಿಸಿದ್ದರು.
ಈ ಆರೋಪಕ್ಕೆ ಟಾಂಗ್ ನೀಡಲು ಯತ್ನಿಸಿರುವ ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ ಎಂದು ಹೇಳಿಕೆ ನೀಡಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಒಡಿಶಾದಲ್ಲಿ ಭಾರತ್ ಜೋಡ್ ನ್ಯಾಯ್ ಯಾತ್ರೆಯ ಮೂರನೇ ದಿನದಂದು ಮಾತನಾಡಿದ ರಾಹುಲ್ ಗಾಂಧಿ ʼಪ್ರಧಾನಮಂತ್ರಿ ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ. ಗುಜರಾತ್ನಲ್ಲಿ ತೇಲಿ ಎಂಬ ಜಾತಿಯಲ್ಲಿ ಅವರು ಜನಿಸಿದರು. ಆ ಸಮುದಾಯಕ್ಕೆ 2000ರಲ್ಲಿ ಬಿಜೆಪಿ ಒಬಿಸಿ ಎಂಬ ಟ್ಯಾಗ್ ಅನ್ನು ನೀಡಿತು. ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ. ಅವರು ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ ಹಾಗೂ ಸಾಮಾನ್ಯ ಜಾತಿಯಲ್ಲಿ ಜನಿಸಿರುವ ಕಾರಣದಿಂದಲೇ ತಮ್ಮ ಸಂಪೂರ್ಣ ಜೀವನದಲ್ಲಿ ಜಾತಿಗಣತಿ ಮಾಡಲು ಬಿಡುವುದಿಲ್ಲ” ಎಂದು ಆರೋಪಿಸಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…