ರಾಷ್ಟ್ರೀಯ

ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಗಿಂತ ನೆಹರೂ ಕೊಡುಗೆ ದೊಡ್ಡದು: ಸುಧೀಂದ್ರ ಕುಲಕರ್ಣಿ

ಮುಂಬೈ: ಸಂವಿಧಾನಕ್ಕೆ ಪಂಡಿತ್ ಜವಾಹರಲಾಲ್ ನೆಹರೂ ಅವರ ಕೊಡುಗೆ ಡಾ. ಬಿ.ಆರ್ ಅಂಬೇಡ್ಕರ್ ಅವರಿಗಿಂತ ದೊಡ್ಡದು ಎಂದು ಸುಧೀಂದ್ರ ಕುಲಕರ್ಣಿ ಹೇಳಿಕೆ ನೀಡಿದ್ದಾರೆ. ಅಲ್ಲದೆ ತಮ್ಮ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರು ಹೇಳಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ.

ಈ ಕುರಿತು ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆಗೆ ಬದ್ಧವಾಗಿದ್ದು, ಕ್ಷಮೆಯಾಚಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ರಚಿಸಿದವರು ಎಂದು ಭಾವಿಸಲಾಗಿದೆ. ಆದರೆ, ಈ ಬಗ್ಗೆ ಸಂಶೋಧನೆ ಮಾಡಿದ್ದು, ಇತಿಹಾಸದ ವಾಸ್ತವಾಂಶ ಪರಿಶೀಲಿಸಿದರೆ ಅದು ಸುಳ್ಳು ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿ ಮಾಧ್ಯಮವೊಂದರಲ್ಲಿ ಸುಧೀಂದ್ರ ಕುಲಕರ್ಣಿ ಬರೆದಿದ್ದ ಲೇಖನದ ಲಿಂಕ್ ಅನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದರು. ನಂತರ ಅದನ್ನು ಡಿಲೀಟ್ ಮಾಡಿದ್ದರು. ಲೇಖನದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ, ದಲಿತರು ಹಾಗೂ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಟೀಕಿಸಿದೆ.

https://x.com/ANI/status/1751184086037872956?s=20

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago