ರಾಷ್ಟ್ರೀಯ

ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಗಿಂತ ನೆಹರೂ ಕೊಡುಗೆ ದೊಡ್ಡದು: ಸುಧೀಂದ್ರ ಕುಲಕರ್ಣಿ

ಮುಂಬೈ: ಸಂವಿಧಾನಕ್ಕೆ ಪಂಡಿತ್ ಜವಾಹರಲಾಲ್ ನೆಹರೂ ಅವರ ಕೊಡುಗೆ ಡಾ. ಬಿ.ಆರ್ ಅಂಬೇಡ್ಕರ್ ಅವರಿಗಿಂತ ದೊಡ್ಡದು ಎಂದು ಸುಧೀಂದ್ರ ಕುಲಕರ್ಣಿ ಹೇಳಿಕೆ ನೀಡಿದ್ದಾರೆ. ಅಲ್ಲದೆ ತಮ್ಮ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರು ಹೇಳಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ.

ಈ ಕುರಿತು ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆಗೆ ಬದ್ಧವಾಗಿದ್ದು, ಕ್ಷಮೆಯಾಚಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ರಚಿಸಿದವರು ಎಂದು ಭಾವಿಸಲಾಗಿದೆ. ಆದರೆ, ಈ ಬಗ್ಗೆ ಸಂಶೋಧನೆ ಮಾಡಿದ್ದು, ಇತಿಹಾಸದ ವಾಸ್ತವಾಂಶ ಪರಿಶೀಲಿಸಿದರೆ ಅದು ಸುಳ್ಳು ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿ ಮಾಧ್ಯಮವೊಂದರಲ್ಲಿ ಸುಧೀಂದ್ರ ಕುಲಕರ್ಣಿ ಬರೆದಿದ್ದ ಲೇಖನದ ಲಿಂಕ್ ಅನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದರು. ನಂತರ ಅದನ್ನು ಡಿಲೀಟ್ ಮಾಡಿದ್ದರು. ಲೇಖನದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ, ದಲಿತರು ಹಾಗೂ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಟೀಕಿಸಿದೆ.

https://x.com/ANI/status/1751184086037872956?s=20

andolanait

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

18 mins ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

26 mins ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

1 hour ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

2 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

3 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

3 hours ago