ಮುಂಬೈ: ಸಂವಿಧಾನಕ್ಕೆ ಪಂಡಿತ್ ಜವಾಹರಲಾಲ್ ನೆಹರೂ ಅವರ ಕೊಡುಗೆ ಡಾ. ಬಿ.ಆರ್ ಅಂಬೇಡ್ಕರ್ ಅವರಿಗಿಂತ ದೊಡ್ಡದು ಎಂದು ಸುಧೀಂದ್ರ ಕುಲಕರ್ಣಿ ಹೇಳಿಕೆ ನೀಡಿದ್ದಾರೆ. ಅಲ್ಲದೆ ತಮ್ಮ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರು ಹೇಳಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ.
ಈ ಕುರಿತು ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆಗೆ ಬದ್ಧವಾಗಿದ್ದು, ಕ್ಷಮೆಯಾಚಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ರಚಿಸಿದವರು ಎಂದು ಭಾವಿಸಲಾಗಿದೆ. ಆದರೆ, ಈ ಬಗ್ಗೆ ಸಂಶೋಧನೆ ಮಾಡಿದ್ದು, ಇತಿಹಾಸದ ವಾಸ್ತವಾಂಶ ಪರಿಶೀಲಿಸಿದರೆ ಅದು ಸುಳ್ಳು ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಸುದ್ದಿ ಮಾಧ್ಯಮವೊಂದರಲ್ಲಿ ಸುಧೀಂದ್ರ ಕುಲಕರ್ಣಿ ಬರೆದಿದ್ದ ಲೇಖನದ ಲಿಂಕ್ ಅನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದರು. ನಂತರ ಅದನ್ನು ಡಿಲೀಟ್ ಮಾಡಿದ್ದರು. ಲೇಖನದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ, ದಲಿತರು ಹಾಗೂ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಟೀಕಿಸಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…