ರಾಷ್ಟ್ರೀಯ

ತೆರಿಗೆ ಹಂಚಿಕೆ: ಕರ್ನಾಟಕಕ್ಕೆ ಸಿಕ್ಕ ಹಣವೆಷ್ಟು? ಲೆಕ್ಕ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್‌

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸರಿಯಾಗಿ ತೆರಿಗೆ ಅನುದಾನ ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಂದು ( ಫೆಬ್ರವರಿ 7 ) ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿತು. ಇದಾದ ಬೆನ್ನಲ್ಲೇ ಈ ಕುರಿತು ಮಾತನಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಕಳೆದ ಹಣಕಾಸು ಆಯೋಗಕ್ಕೆ ಹೋಲಿಸಿದರೆ ಈ ಬಾರಿಯ ಆಯೋಗದಲ್ಲಿ ಕರ್ನಾಟಕ್ಕೆ ಹೆಚ್ಚಿನ ತೆರಿಗೆ ಹಂಚಿಕೆ ಪಡೆದಿದೆ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್‌ ವಾದಗಳಿಗೆ ಉತ್ತರ ನೀಡಿದ್ದಾರೆ.

ಕರ್ನಾಟಕದ ಜಿಎಸ್‌ಟಿಯ ಒಂದು ರೂಪಾಯಿಯನ್ನೂ ಸಹ ಬಾಕಿ ಉಳಿಸಿಕೊಂಡಿಲ್ಲ ಎಂದಿರುವ ನಿರ್ಮಲಾ ಸೀತಾರಾಮನ್‌ ಬರಪರಿಹಾರವೂ ಸೇರಿದಂತೆ ಪ್ರಕೃತಿ ವಿಕೋಪ ನಿಧಿಯಡಿ ಮುಂಗಡವಾಗಿ 6196 ಸಾವಿರ ಕೋಟಿ ರೂಪಾಯಿಗಳ್ನೂ ಸಹ ನೀಡಲಾಗಿದೆ ಎಂದಿದ್ದಾರೆ. ಆದರೆ ಕಾಂಗ್ರೆಸ್‌ ಮಾತ್ರ ಬಾಕಿ ಬರಬೇಕಿದೆ ಎಂದು ತಪ್ಪು ಮಾಹಿತಿಯನ್ನು ನೀಡಿ ಜನರ ದಾರಿ ತಪ್ಪಿಸುತ್ತಿದೆ ಎಂದು ನಿರ್ಮಲಾ ಸೀತಾರಾಮನ್‌ ಕಿಡಿಕಾರಿದ್ದಾರೆ.

“14ನೇ ಹಣಕಾಸು ಆಯೋಗದ 5 ವರ್ಷಗಳ ಅವಧಿಯಲ್ಲಿ ಕರ್ನಾಟಕ 151309 ಕೋಟಿ ರೂಪಾಯಿ ತೆರಿಗೆ ಹಂಚಿಕೆ ಪಡೆದಿದೆ. ಪ್ರಸ್ತುತ 15ನೇ ಹಣಕಾಸು ಅವಧಿಯ ಮೊದಲ 4 ವರ್ಷಗಳಲ್ಲಿ ಅಂದರೆ ಮಾರ್ಚ್ 2024ರವರೆಗೆ ಕರ್ನಾಟಕವು ಈಗಾಗಲೇ 129854 ಕೋಟಿ ರೂಪಾಯಿಗಳನ್ನು ಪಡೆದಿದೆ. ಕೇಂದ್ರ ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ 44485 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಯೋಜಿಸಿದೆ. ಈ ಮೂಲಕ ಹಣಕಾಸು ವರ್ಷ 2024-25 ಸೇರಿ ಐದು ವರ್ಷಗಳ ಅವಧಿಯಲ್ಲಿ ಕರ್ನಾಟಕ 174339 ಕೋಟಿ ರೂಪಾಯಿಗಳನ್ನು ಪಡೆದಂತಾಗಲಿದೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ ವಿರುದ್ಧ ತನ್ನ ವಾಗ್ದಾಳಿಯನ್ನು ಮುಂದುವರಿಸಿದ ನಿರ್ಮಲಾ ಸೀತಾರಾಮನ್‌ “ಕರ್ನಾಟಕವು 14ನೇ ಆಯೋಗದ ಅವಧಿಗಿಂತ 15ನೇ ಆಯೋಗದ ಅವಧಿಯಲ್ಲಿ ಹೆಚ್ಚು ಮೊತ್ತವನ್ನು ಪಡೆದಿದೆ. ನಷ್ಟದ ಸುಳ್ಳು ಹೇಳಿಕೆಯನ್ನು ಕಾಂಗ್ರೆಸ್ ಬಲಪಡಿಸಿಕೊಳ್ಳುವ ಯತ್ನ ನಡೆಸುತ್ತಿದೆ. ಕರ್ನಾಟಕ ಮುಂದಿನ 2 ಹಣಕಾಸು ವರ್ಷಗಳ ಆದಾಯ ಕೊರತೆ ಅನುದಾನವನ್ನು ಸಹ ಪಡೆದಿದೆ. ಜತೆಗೆ ಕೇರಳ ಸಹ ಆದಾಯ ಕೊರತೆಯ ಅನುದಾನವನ್ನು ಪಡೆದಿದೆ” ಎಂದು ಸ್ಪಷ್ಟಪಡಿಸಿದರು.

ಅಲ್ಲದೇ “ಬಿಜೆಪಿ ಆಡಳಿತದ ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಹಾಗೂ ಬಿಹಾರ ರಾಜ್ಯಗಳು ಯಾವುದೇ ರೀತಿಯ ಆದಾಯ ಕೊರತೆ ಅನುದಾನವನ್ನು ಪಡೆದಿಲ್ಲ. ಯಾವುದೇ ಪ್ರದೇಶದ ವಿರುದ್ಧವಾಗಲಿ ಅಥವಾ ಸರ್ಕಾರದ ವಿರುದ್ಧವಾಗಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ. 50 ವರ್ಷಗಳ ಬಡ್ಡಿರಹಿತ ಸಾಲ ಯೋಜನೆಯನ್ನು ಕೇಂದ್ರ ಜಾರಿಗೆ ತಂದಿದ್ದು, ಈ ಯೋಜನೆಯಡಿಯಲ್ಲಿ ಕರ್ನಾಟಕಕ್ಕೆ 6280 ಕೋಟಿ ಬಡ್ಡಿರಹಿತ ಸಾಲವನ್ನು ನೀಡಿದೆ. ಕರ್ನಾಟಕವು 15ನೇ ಹಣಕಾಸು ಅವಧಿಯಲ್ಲಿ ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ವಿಪತ್ತು ನಿರ್ವಹಣೆಗೆ 6196 ಕೋಟಿ ರೂಪಾಯಿಗಳನ್ನು ನೀಡಿದೆ. ತೆರಿಗೆ ಅನುದಾನ ನೀಡಿಲ್ಲ ಎಂದು ಹೇಳಲು ಜಾಹೀರಾತಿಗಾಗಿ ಕೋಟ್ಯಂತರ ಖರ್ಚು ಮಾಡಿದೆ. ಜಾಹೀರಾತಿನಲ್ಲಿ ಅನುದಾನವನ್ನೇ ನೀಡಿಲ್ಲ ಎಂದು ಸುಳ್ಳು ಹೇಳಲಾಗಿದೆ. ವಿಶೇಷ ಅನುದಾನ ನೀಡಲು ಹಣಕಾಸು ಆಯೋಗ ಶಿಫಾರಸು ಮಾಡಿಲ್ಲ. ಆದರೂ ಸಹ ಇಲ್ಲಿ ಪ್ರಸ್ತಾಪಿಸಲಾಗಿದೆ” ಎಂದು ನಿರ್ಮಲಾ ಸೀತಾರಾಮನ್‌ ಸಿದ್ದರಾಮಯ್ಯ ಅಂಡ್‌ ಟೀಮ್‌ಗೆ ಪ್ರತ್ಯುತ್ತರ ನೀಡಿದ್ದಾರೆ.

andolana

Recent Posts

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

1 hour ago

ನಾಳೆ ಎರಡೂವರೆ ಗಂಟೆ ಪ್ರವಾಸಿಗರಿಗಿಲ್ಲ ತಾಜ್‌ ಮಹಲ್‌ ಪ್ರವೇಶ: ಕಾರಣ ಏನ್‌ ಗೊತ್ತಾ.?

ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್‌ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್‌…

2 hours ago

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…

2 hours ago

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

3 hours ago

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…

3 hours ago

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

4 hours ago