ಪಾಟ್ನಾ: ನಮ್ಮ ಪಕ್ಷದ ನಾಯಕರ ಅಪೇಕ್ಷೆಯಂತೆ ರಾಜೀನಾಮೆ ಸಲ್ಲಿಸಿದ್ದೇನೆ. ಮಹಾಮೈತ್ರಿ ಸರ್ಕಾರ ಅಂತ್ಯವಾಗಿದೆ, ಅಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ ಎಂದು ನಿರ್ಗಮಿತ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
ಇಂಡಿಯಾ ಒಕ್ಕೂಟವನ್ನು ರೂಪಿಸಲು ಮತ್ತು ಅದನ್ನು ಮುಂದಕ್ಕೆ ಕೊಂಡೊಯ್ಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ ಆದರೆ ಇತರರು ಅದರಲ್ಲಿ ಆಸಕ್ತಿ ತೋರಿಸಲಿಲ್ಲ ಎಂದು ಹೇಳಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದ ಪಾಟ್ನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರನ್ನು ಕೇಳಿದ್ದೇನೆ. INDIA ಒಕ್ಕೂಟದಿಂದಲೂ ಹೊರಗೆ ಬಂದಿದ್ದು, ಮಹಾಘಟಬಂಧನ್ನಿಂದಲೂ ಆಚೆ ಬಂದಿದ್ದೇನೆ ಎಂದು ರಾಜೀನಾಮೆ ನೀಡಿದ ಬಳಿಕ ಮಾತನಾಡಿದರು.
ಇಂಡಿಯಾ ಒಕ್ಕೂಟದಿಂದ ಹೊರಬಂದು ನಿತೀಶ್ ಕುಮಾರ್ ಎನ್ಡಿಎ (NDA) ತೆಕ್ಕೆಗೆ ಮರಳಿದ್ದಾರೆ. ಇನ್ನುಮುಂದೆ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಆಡಳಿತ ನಡೆಸಲಿದ್ದು, ಇಂದು ಸಂಜೆ ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಬೆಳಗ್ಗೆ ಜೆಡಿಯು ಶಾಸಕರ ಸಭೆಯ ನಂತರ ನಿತೀಶ್ ಕುಮಾರ್ ಅವರು ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜೀನಾಮೆ ಸಲ್ಲಿಸಿದರು. ಲಾಲು ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮತ್ತು ಕಾಂಗ್ರೆಸ್ ಜೊತೆಗಿನ 18 ತಿಂಗಳ ಮೈತ್ರಿ ಕೊನೆಗೊಂಡಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…