ರಾಷ್ಟ್ರೀಯ

ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ನಿತೀಶ್‌ ಕುಮಾರ್‌ ಫಸ್ಟ್ ರಿಯಾಕ್ಷನ್

ಪಾಟ್ನಾ: ನಮ್ಮ ಪಕ್ಷದ ನಾಯಕರ ಅಪೇಕ್ಷೆಯಂತೆ ರಾಜೀನಾಮೆ ಸಲ್ಲಿಸಿದ್ದೇನೆ. ಮಹಾಮೈತ್ರಿ ಸರ್ಕಾರ ಅಂತ್ಯವಾಗಿದೆ, ಅಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ ಎಂದು ನಿರ್ಗಮಿತ ಸಿಎಂ ನಿತೀಶ್ ಕುಮಾರ್‌ ಹೇಳಿದ್ದಾರೆ.

ಇಂಡಿಯಾ ಒಕ್ಕೂಟವನ್ನು ರೂಪಿಸಲು ಮತ್ತು ಅದನ್ನು ಮುಂದಕ್ಕೆ ಕೊಂಡೊಯ್ಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ ಆದರೆ ಇತರರು ಅದರಲ್ಲಿ ಆಸಕ್ತಿ ತೋರಿಸಲಿಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದ ಪಾಟ್ನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರನ್ನು ಕೇಳಿದ್ದೇನೆ. INDIA ಒಕ್ಕೂಟದಿಂದಲೂ ಹೊರಗೆ ಬಂದಿದ್ದು, ಮಹಾಘಟಬಂಧನ್‌ನಿಂದಲೂ ಆಚೆ ಬಂದಿದ್ದೇನೆ ಎಂದು ರಾಜೀನಾಮೆ ನೀಡಿದ ಬಳಿಕ ಮಾತನಾಡಿದರು.

ಇಂಡಿಯಾ ಒಕ್ಕೂಟದಿಂದ ಹೊರಬಂದು ನಿತೀಶ್ ಕುಮಾರ್ ಎನ್‌ಡಿಎ (NDA) ತೆಕ್ಕೆಗೆ ಮರಳಿದ್ದಾರೆ. ಇನ್ನುಮುಂದೆ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಆಡಳಿತ ನಡೆಸಲಿದ್ದು, ಇಂದು ಸಂಜೆ ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಬೆಳಗ್ಗೆ ಜೆಡಿಯು ಶಾಸಕರ ಸಭೆಯ ನಂತರ ನಿತೀಶ್ ಕುಮಾರ್ ಅವರು ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜೀನಾಮೆ ಸಲ್ಲಿಸಿದರು. ಲಾಲು ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮತ್ತು ಕಾಂಗ್ರೆಸ್ ಜೊತೆಗಿನ 18 ತಿಂಗಳ ಮೈತ್ರಿ ಕೊನೆಗೊಂಡಿದೆ.

andolanait

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

2 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

2 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

3 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

3 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

5 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

5 hours ago