ರಾಷ್ಟ್ರೀಯ

ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ನಿತೀಶ್‌ ಕುಮಾರ್‌ ಫಸ್ಟ್ ರಿಯಾಕ್ಷನ್

ಪಾಟ್ನಾ: ನಮ್ಮ ಪಕ್ಷದ ನಾಯಕರ ಅಪೇಕ್ಷೆಯಂತೆ ರಾಜೀನಾಮೆ ಸಲ್ಲಿಸಿದ್ದೇನೆ. ಮಹಾಮೈತ್ರಿ ಸರ್ಕಾರ ಅಂತ್ಯವಾಗಿದೆ, ಅಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ ಎಂದು ನಿರ್ಗಮಿತ ಸಿಎಂ ನಿತೀಶ್ ಕುಮಾರ್‌ ಹೇಳಿದ್ದಾರೆ.

ಇಂಡಿಯಾ ಒಕ್ಕೂಟವನ್ನು ರೂಪಿಸಲು ಮತ್ತು ಅದನ್ನು ಮುಂದಕ್ಕೆ ಕೊಂಡೊಯ್ಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ ಆದರೆ ಇತರರು ಅದರಲ್ಲಿ ಆಸಕ್ತಿ ತೋರಿಸಲಿಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದ ಪಾಟ್ನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರನ್ನು ಕೇಳಿದ್ದೇನೆ. INDIA ಒಕ್ಕೂಟದಿಂದಲೂ ಹೊರಗೆ ಬಂದಿದ್ದು, ಮಹಾಘಟಬಂಧನ್‌ನಿಂದಲೂ ಆಚೆ ಬಂದಿದ್ದೇನೆ ಎಂದು ರಾಜೀನಾಮೆ ನೀಡಿದ ಬಳಿಕ ಮಾತನಾಡಿದರು.

ಇಂಡಿಯಾ ಒಕ್ಕೂಟದಿಂದ ಹೊರಬಂದು ನಿತೀಶ್ ಕುಮಾರ್ ಎನ್‌ಡಿಎ (NDA) ತೆಕ್ಕೆಗೆ ಮರಳಿದ್ದಾರೆ. ಇನ್ನುಮುಂದೆ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಆಡಳಿತ ನಡೆಸಲಿದ್ದು, ಇಂದು ಸಂಜೆ ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಬೆಳಗ್ಗೆ ಜೆಡಿಯು ಶಾಸಕರ ಸಭೆಯ ನಂತರ ನಿತೀಶ್ ಕುಮಾರ್ ಅವರು ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜೀನಾಮೆ ಸಲ್ಲಿಸಿದರು. ಲಾಲು ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮತ್ತು ಕಾಂಗ್ರೆಸ್ ಜೊತೆಗಿನ 18 ತಿಂಗಳ ಮೈತ್ರಿ ಕೊನೆಗೊಂಡಿದೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago