ಉತ್ತರ ಪ್ರದೇಶ: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೇ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ.
ಲಕ್ನೋದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಹೆನ್ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ತನ್ನ ಚಾಣಾಕ್ಷ ರಾಜಕೀಯ ತಂತ್ರಗಳಿಗೆ ಹೆಸರುವಾಸಿಯಾಗಿರುವ ಮಾಯಾವತಿ, ಲೋಕಸಭಾ ಚುನಾವಣೆಯ ಸ್ವತಂತ್ರ ನಿಲುವನ್ನು ತಿಳಿಸಲು ತಮ್ಮ ಜನ್ಮದಿನವನ್ನೇ ಆಯ್ಕೆಮಾಡಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟಕ್ಕೆ ಸೇರುವುದಿಲ್ಲ ಎಂದು ತಮ್ಮ ನಿಲುವನ್ನು ತಿಳಿಸಿದ್ದಾರೆ.
ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ಕಷ್ಟವಾಗಲಿದೆ. ಮೇಲ್ವರ್ಗದ ಮತಗಳು ಬಿಎಸ್ಪಿಗೆ ವರ್ಗಾವಣೆಯಾಗುವುದಿಲ್ಲ, ದಲಿತ ಮತಗಳು ವರ್ಗಾವಣೆಯಾಗುತ್ತವೆ. ನಮ್ಮ ಮತಗಳ ಶೇಕಡಾವಾರು ಪ್ರಮಾಣವೂ ಕಡಿಮೆಯಾಗುತ್ತದೆ ಮತ್ತು ಇತರೆ ಪಕ್ಷಗಳಿಗೆ ಲಾಭವಾಗುತ್ತದೆ. ನಮ್ಮ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಮೂಲಕ ಉತ್ತಮ ಫಲಿತಾಂಶ ತರಲಿದೆ. ಮೈತ್ರಿ ಮಾಡಿಕೊಂಡರೆ ಬಿಎಸ್ಪಿಯ ಸಂಪೂರ್ಣ ಮತವು ಮೈತ್ರಿ ಪಕ್ಷಕ್ಕೆ ಹೋಗುತ್ತದೆ ಎಂದಿದ್ದಾರೆ
ಚುನಾವಣೆ ಮುಗಿದ ಬಳಿಕ ಮೈತ್ರಿ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…