ಉತ್ತರ ಪ್ರದೇಶ: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೇ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ.
ಲಕ್ನೋದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಹೆನ್ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ತನ್ನ ಚಾಣಾಕ್ಷ ರಾಜಕೀಯ ತಂತ್ರಗಳಿಗೆ ಹೆಸರುವಾಸಿಯಾಗಿರುವ ಮಾಯಾವತಿ, ಲೋಕಸಭಾ ಚುನಾವಣೆಯ ಸ್ವತಂತ್ರ ನಿಲುವನ್ನು ತಿಳಿಸಲು ತಮ್ಮ ಜನ್ಮದಿನವನ್ನೇ ಆಯ್ಕೆಮಾಡಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟಕ್ಕೆ ಸೇರುವುದಿಲ್ಲ ಎಂದು ತಮ್ಮ ನಿಲುವನ್ನು ತಿಳಿಸಿದ್ದಾರೆ.
ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ಕಷ್ಟವಾಗಲಿದೆ. ಮೇಲ್ವರ್ಗದ ಮತಗಳು ಬಿಎಸ್ಪಿಗೆ ವರ್ಗಾವಣೆಯಾಗುವುದಿಲ್ಲ, ದಲಿತ ಮತಗಳು ವರ್ಗಾವಣೆಯಾಗುತ್ತವೆ. ನಮ್ಮ ಮತಗಳ ಶೇಕಡಾವಾರು ಪ್ರಮಾಣವೂ ಕಡಿಮೆಯಾಗುತ್ತದೆ ಮತ್ತು ಇತರೆ ಪಕ್ಷಗಳಿಗೆ ಲಾಭವಾಗುತ್ತದೆ. ನಮ್ಮ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಮೂಲಕ ಉತ್ತಮ ಫಲಿತಾಂಶ ತರಲಿದೆ. ಮೈತ್ರಿ ಮಾಡಿಕೊಂಡರೆ ಬಿಎಸ್ಪಿಯ ಸಂಪೂರ್ಣ ಮತವು ಮೈತ್ರಿ ಪಕ್ಷಕ್ಕೆ ಹೋಗುತ್ತದೆ ಎಂದಿದ್ದಾರೆ
ಚುನಾವಣೆ ಮುಗಿದ ಬಳಿಕ ಮೈತ್ರಿ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…