ಕೊಲ್ಕತ್ತಾ : ಕೇಂದ್ರದ ಎನ್ಡಿಎ ಸರ್ಕಾರದ ಪೌರತ್ವ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಕೋಲ್ಕತಾದಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ, ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಅದನ್ನು ಜಾರಿಗೊಳಿಸುವುದು ನಿಶ್ಚಿತ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ, ತುಷ್ಟೀಕರಣ ರಾಜಕೀಯ ಈ ಬಾರಿ ಕೆಲಸ ಮಾಡುವುದಿಲ್ಲ. ಅಂತೆಯೇ ಅಕ್ರಮ ಒಳ ನುಸುಳುವಿಕೆ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರದ ವಿಷಯಗಳ ಬಗ್ಗೆ ಬಿರುಸಿನ ವಾಗ್ದಾಳಿ ನಡೆಸಿದ ಅವರು, ಈ ಬಾರಿ ಚುನಾವಣೆಯಲ್ಲಿ ಮಮತಾ ಅವರ ಸರ್ಕಾರವನ್ನು ಹೊರಹಾಕಿ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಜನರಿಗೆ ಮನವಿ ಮಾಡಿದರು.
ಸಿಎಎ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಮಿತ್ ಶಾ, ಮಮತಾ ಬ್ಯಾನರ್ಜಿ ಇದನ್ನು ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ ಎಂದರು. 2019 ರಲ್ಲಿ ರಾಜ್ಯದ 42 ಸ್ಥಾನಗಳಲ್ಲಿ ಪಕ್ಷವು 18 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇದು ಬಂಗಾಳದಲ್ಲಿ ಬಿಜೆಪಿ ಗಳಿಸಿದ ಈವರೆಗಿನ ಅತ್ಯಧಿಕ ಸ್ಥಾನಗಳಾಗಿವೆ.
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…
ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…
ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…