ಕೊಲ್ಕತ್ತಾ : ಕೇಂದ್ರದ ಎನ್ಡಿಎ ಸರ್ಕಾರದ ಪೌರತ್ವ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಕೋಲ್ಕತಾದಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ, ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಅದನ್ನು ಜಾರಿಗೊಳಿಸುವುದು ನಿಶ್ಚಿತ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ, ತುಷ್ಟೀಕರಣ ರಾಜಕೀಯ ಈ ಬಾರಿ ಕೆಲಸ ಮಾಡುವುದಿಲ್ಲ. ಅಂತೆಯೇ ಅಕ್ರಮ ಒಳ ನುಸುಳುವಿಕೆ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರದ ವಿಷಯಗಳ ಬಗ್ಗೆ ಬಿರುಸಿನ ವಾಗ್ದಾಳಿ ನಡೆಸಿದ ಅವರು, ಈ ಬಾರಿ ಚುನಾವಣೆಯಲ್ಲಿ ಮಮತಾ ಅವರ ಸರ್ಕಾರವನ್ನು ಹೊರಹಾಕಿ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಜನರಿಗೆ ಮನವಿ ಮಾಡಿದರು.
ಸಿಎಎ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಮಿತ್ ಶಾ, ಮಮತಾ ಬ್ಯಾನರ್ಜಿ ಇದನ್ನು ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ ಎಂದರು. 2019 ರಲ್ಲಿ ರಾಜ್ಯದ 42 ಸ್ಥಾನಗಳಲ್ಲಿ ಪಕ್ಷವು 18 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇದು ಬಂಗಾಳದಲ್ಲಿ ಬಿಜೆಪಿ ಗಳಿಸಿದ ಈವರೆಗಿನ ಅತ್ಯಧಿಕ ಸ್ಥಾನಗಳಾಗಿವೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…