ರಾಷ್ಟ್ರೀಯ

ಸಿಎಎ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಕೊಲ್ಕತ್ತಾ : ಕೇಂದ್ರದ ಎನ್‌ಡಿಎ ಸರ್ಕಾರದ ಪೌರತ್ವ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಕೋಲ್ಕತಾದಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ, ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಅದನ್ನು ಜಾರಿಗೊಳಿಸುವುದು ನಿಶ್ಚಿತ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ, ತುಷ್ಟೀಕರಣ ರಾಜಕೀಯ ಈ ಬಾರಿ ಕೆಲಸ ಮಾಡುವುದಿಲ್ಲ. ಅಂತೆಯೇ ಅಕ್ರಮ ಒಳ ನುಸುಳುವಿಕೆ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರದ ವಿಷಯಗಳ ಬಗ್ಗೆ ಬಿರುಸಿನ ವಾಗ್ದಾಳಿ ನಡೆಸಿದ ಅವರು, ಈ ಬಾರಿ ಚುನಾವಣೆಯಲ್ಲಿ ಮಮತಾ ಅವರ ಸರ್ಕಾರವನ್ನು ಹೊರಹಾಕಿ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಜನರಿಗೆ ಮನವಿ ಮಾಡಿದರು.

ಸಿಎಎ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಮಿತ್ ಶಾ, ಮಮತಾ ಬ್ಯಾನರ್ಜಿ ಇದನ್ನು ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ ಎಂದರು. 2019 ರಲ್ಲಿ ರಾಜ್ಯದ 42 ಸ್ಥಾನಗಳಲ್ಲಿ ಪಕ್ಷವು 18 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇದು ಬಂಗಾಳದಲ್ಲಿ ಬಿಜೆಪಿ ಗಳಿಸಿದ ಈವರೆಗಿನ ಅತ್ಯಧಿಕ ಸ್ಥಾನಗಳಾಗಿವೆ.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

3 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

3 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

3 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

3 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

3 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

3 hours ago