ರಾಷ್ಟ್ರೀಯ

ಜಾಗತಿಕ ಹಸಿವು ಸೂಚ್ಯಂಕ ವರದಿ ತಯಾರಿ ಬಗ್ಗೆ ಕೇಂದ್ರ ಸಚಿವೆಯ ಹೇಳಿಕೆಗೆ ಪ್ರತಿಪಕ್ಷಗಳಿಂದ ಆಕ್ಷೇಪ

ನವದೆಹಲಿ : ಜಾಗತಿಕ ಹಸಿವಿನ ಸೂಚ್ಯಂಕದ ವಿಶ್ವಾಸಾರ್ಹತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆಗಳ ವಿರುದ್ಧ ವಿಪಕ್ಷಗಳು ತೀವ್ರವಾಗಿ ಹರಿಹಾಯ್ದಿದ್ದು, ಸಚಿವೆಯ ಅಜ್ಞಾನವನ್ನು ಟೀಕಿಸಿದೆ.

140 ಕೋಟಿ ಜನರಲ್ಲಿ 3,000 ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು (ಜಿಎಚ್‌ಐ) ಲೆಕ್ಕ ಹಾಕಲಾಗುತ್ತದೆ. ಈ ವರದಿಯಲ್ಲಿ ಭಾರತಕ್ಕಿಂತ ಪಾಕಿಸ್ತಾನ ಉತ್ತಮ ಸ್ಥಿತಿಯಲ್ಲಿದೆ ಎನ್ನಲಾಗಿದೆ, ಇದನ್ನು ಯಾರಾದರೂ ನಂಬುತ್ತಾರೆಯೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಇರಾನಿ ಅವರು ಹೇಳಿದ್ದರು.

ಶುಕ್ರವಾರ ಹೈದರಾಬಾದ್‌ನಲ್ಲಿ ನಡೆದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ (ಎಫ್‌ಐಸಿಸಿಐ) ಸಮ್ಮೇಳನದಲ್ಲಿ ಮಾತನಾಡುತ್ತಾ ಸ್ಮೃತಿ ಇರಾನಿ ಅವರು ಜಾಗತಿಕ ಹಸಿವು ಸೂಚ್ಯಂಕದ ಬಗ್ಗೆ ತಮ್ಮ ಟೀಕೆಗಳನ್ನು ಮಾಡಿದ್ದರು.

ಇರಾನಿ ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಶ್ರಿನೇಟ್ ಅವರು, “ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನೆಂದು ನನಗೆ ತಿಳಿದಿಲ್ಲ, ನಿಮ್ಮ ಅಜ್ಞಾನದ ಮಟ್ಟ ಅಥವಾ ನಿಮ್ಮ ಸಂವೇದನಾಶೂನ್ಯತೆಯನ್ನು ನೀವು ಇಲ್ಲಿ ಪ್ರದರ್ಶಿಸಿದ್ದೀರಾ? ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು ಲೆಕ್ಕಹಾಕಲಾಗಿದೆ ಎಂದು ನೀವು ಪ್ರಾಮಾಣಿಕವಾಗಿ ಭಾವಿಸುತ್ತೀರಾ !!???” ಎಂದು ಪ್ರಶ್ನಿಸಿದ್ದಾರೆ.

“ನೀವು ಭಾರತ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದೀರಿ ಎಂದು ಕೇಳಲು ಭಯಾನಕವಾಗಿದೆ!” ಎಂದು ಹೇಳಿದ ಅವರು, ಒಂದು ದೇಶದ ಜಾಗತಿಕ ಹಸಿವಿನ ಸೂಚ್ಯಂಕಕ್ಕೆ ಆಧರಿಸಿದ ನಾಲ್ಕು ಅಂಶಗಳ ಬಗ್ಗೆ ವಿವರಿಸಿದ್ದಾರೆ.

ಅಪೌಷ್ಟಿಕತೆ, ಮಕ್ಕಳ ಬೆಳವಣಿಗೆ ಕುಂಠಿತ, ಮಕ್ಕಳ ಕ್ಷೀಣತೆ ಮತ್ತು ಮಕ್ಕಳ ಮರಣ ಎಂಬ ನಾಲ್ಕು ಅಂಶಗಳ ಅರ್ಥವನ್ನು ವಿವರವಾಗಿ ಬರೆದಿದ್ದಾರೆ. ಅಲ್ಲದೆ, ಭಾರತ ಸರ್ಕಾರದ ಮಂತ್ರಿಯಾಗಿರುವ ಪ್ರಭಾವಿ ಮಹಿಳೆಯಾದ ನೀವು ಹಸಿವಿನ ಬಗ್ಗೆ ಅಪಹಾಸ್ಯ ಮಾಡಬೇಡಿ ಎಂದು ಸುಪ್ರಿಯಾ ಅವರು ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

1 hour ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

1 hour ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

2 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

2 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

2 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

2 hours ago