ರಾಷ್ಟ್ರೀಯ

ಜಾಗತಿಕ ಹಸಿವು ಸೂಚ್ಯಂಕ ವರದಿ ತಯಾರಿ ಬಗ್ಗೆ ಕೇಂದ್ರ ಸಚಿವೆಯ ಹೇಳಿಕೆಗೆ ಪ್ರತಿಪಕ್ಷಗಳಿಂದ ಆಕ್ಷೇಪ

ನವದೆಹಲಿ : ಜಾಗತಿಕ ಹಸಿವಿನ ಸೂಚ್ಯಂಕದ ವಿಶ್ವಾಸಾರ್ಹತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆಗಳ ವಿರುದ್ಧ ವಿಪಕ್ಷಗಳು ತೀವ್ರವಾಗಿ ಹರಿಹಾಯ್ದಿದ್ದು, ಸಚಿವೆಯ ಅಜ್ಞಾನವನ್ನು ಟೀಕಿಸಿದೆ.

140 ಕೋಟಿ ಜನರಲ್ಲಿ 3,000 ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು (ಜಿಎಚ್‌ಐ) ಲೆಕ್ಕ ಹಾಕಲಾಗುತ್ತದೆ. ಈ ವರದಿಯಲ್ಲಿ ಭಾರತಕ್ಕಿಂತ ಪಾಕಿಸ್ತಾನ ಉತ್ತಮ ಸ್ಥಿತಿಯಲ್ಲಿದೆ ಎನ್ನಲಾಗಿದೆ, ಇದನ್ನು ಯಾರಾದರೂ ನಂಬುತ್ತಾರೆಯೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಇರಾನಿ ಅವರು ಹೇಳಿದ್ದರು.

ಶುಕ್ರವಾರ ಹೈದರಾಬಾದ್‌ನಲ್ಲಿ ನಡೆದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ (ಎಫ್‌ಐಸಿಸಿಐ) ಸಮ್ಮೇಳನದಲ್ಲಿ ಮಾತನಾಡುತ್ತಾ ಸ್ಮೃತಿ ಇರಾನಿ ಅವರು ಜಾಗತಿಕ ಹಸಿವು ಸೂಚ್ಯಂಕದ ಬಗ್ಗೆ ತಮ್ಮ ಟೀಕೆಗಳನ್ನು ಮಾಡಿದ್ದರು.

ಇರಾನಿ ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಶ್ರಿನೇಟ್ ಅವರು, “ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನೆಂದು ನನಗೆ ತಿಳಿದಿಲ್ಲ, ನಿಮ್ಮ ಅಜ್ಞಾನದ ಮಟ್ಟ ಅಥವಾ ನಿಮ್ಮ ಸಂವೇದನಾಶೂನ್ಯತೆಯನ್ನು ನೀವು ಇಲ್ಲಿ ಪ್ರದರ್ಶಿಸಿದ್ದೀರಾ? ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು ಲೆಕ್ಕಹಾಕಲಾಗಿದೆ ಎಂದು ನೀವು ಪ್ರಾಮಾಣಿಕವಾಗಿ ಭಾವಿಸುತ್ತೀರಾ !!???” ಎಂದು ಪ್ರಶ್ನಿಸಿದ್ದಾರೆ.

“ನೀವು ಭಾರತ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದೀರಿ ಎಂದು ಕೇಳಲು ಭಯಾನಕವಾಗಿದೆ!” ಎಂದು ಹೇಳಿದ ಅವರು, ಒಂದು ದೇಶದ ಜಾಗತಿಕ ಹಸಿವಿನ ಸೂಚ್ಯಂಕಕ್ಕೆ ಆಧರಿಸಿದ ನಾಲ್ಕು ಅಂಶಗಳ ಬಗ್ಗೆ ವಿವರಿಸಿದ್ದಾರೆ.

ಅಪೌಷ್ಟಿಕತೆ, ಮಕ್ಕಳ ಬೆಳವಣಿಗೆ ಕುಂಠಿತ, ಮಕ್ಕಳ ಕ್ಷೀಣತೆ ಮತ್ತು ಮಕ್ಕಳ ಮರಣ ಎಂಬ ನಾಲ್ಕು ಅಂಶಗಳ ಅರ್ಥವನ್ನು ವಿವರವಾಗಿ ಬರೆದಿದ್ದಾರೆ. ಅಲ್ಲದೆ, ಭಾರತ ಸರ್ಕಾರದ ಮಂತ್ರಿಯಾಗಿರುವ ಪ್ರಭಾವಿ ಮಹಿಳೆಯಾದ ನೀವು ಹಸಿವಿನ ಬಗ್ಗೆ ಅಪಹಾಸ್ಯ ಮಾಡಬೇಡಿ ಎಂದು ಸುಪ್ರಿಯಾ ಅವರು ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago