ನವದೆಹಲಿ : ಜಾಗತಿಕ ಹಸಿವಿನ ಸೂಚ್ಯಂಕದ ವಿಶ್ವಾಸಾರ್ಹತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆಗಳ ವಿರುದ್ಧ ವಿಪಕ್ಷಗಳು ತೀವ್ರವಾಗಿ ಹರಿಹಾಯ್ದಿದ್ದು, ಸಚಿವೆಯ ಅಜ್ಞಾನವನ್ನು ಟೀಕಿಸಿದೆ.
140 ಕೋಟಿ ಜನರಲ್ಲಿ 3,000 ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು (ಜಿಎಚ್ಐ) ಲೆಕ್ಕ ಹಾಕಲಾಗುತ್ತದೆ. ಈ ವರದಿಯಲ್ಲಿ ಭಾರತಕ್ಕಿಂತ ಪಾಕಿಸ್ತಾನ ಉತ್ತಮ ಸ್ಥಿತಿಯಲ್ಲಿದೆ ಎನ್ನಲಾಗಿದೆ, ಇದನ್ನು ಯಾರಾದರೂ ನಂಬುತ್ತಾರೆಯೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಇರಾನಿ ಅವರು ಹೇಳಿದ್ದರು.
ಶುಕ್ರವಾರ ಹೈದರಾಬಾದ್ನಲ್ಲಿ ನಡೆದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ (ಎಫ್ಐಸಿಸಿಐ) ಸಮ್ಮೇಳನದಲ್ಲಿ ಮಾತನಾಡುತ್ತಾ ಸ್ಮೃತಿ ಇರಾನಿ ಅವರು ಜಾಗತಿಕ ಹಸಿವು ಸೂಚ್ಯಂಕದ ಬಗ್ಗೆ ತಮ್ಮ ಟೀಕೆಗಳನ್ನು ಮಾಡಿದ್ದರು.
ಇರಾನಿ ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇಟ್ ಅವರು, “ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನೆಂದು ನನಗೆ ತಿಳಿದಿಲ್ಲ, ನಿಮ್ಮ ಅಜ್ಞಾನದ ಮಟ್ಟ ಅಥವಾ ನಿಮ್ಮ ಸಂವೇದನಾಶೂನ್ಯತೆಯನ್ನು ನೀವು ಇಲ್ಲಿ ಪ್ರದರ್ಶಿಸಿದ್ದೀರಾ? ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು ಲೆಕ್ಕಹಾಕಲಾಗಿದೆ ಎಂದು ನೀವು ಪ್ರಾಮಾಣಿಕವಾಗಿ ಭಾವಿಸುತ್ತೀರಾ !!???” ಎಂದು ಪ್ರಶ್ನಿಸಿದ್ದಾರೆ.
“ನೀವು ಭಾರತ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದೀರಿ ಎಂದು ಕೇಳಲು ಭಯಾನಕವಾಗಿದೆ!” ಎಂದು ಹೇಳಿದ ಅವರು, ಒಂದು ದೇಶದ ಜಾಗತಿಕ ಹಸಿವಿನ ಸೂಚ್ಯಂಕಕ್ಕೆ ಆಧರಿಸಿದ ನಾಲ್ಕು ಅಂಶಗಳ ಬಗ್ಗೆ ವಿವರಿಸಿದ್ದಾರೆ.
ಅಪೌಷ್ಟಿಕತೆ, ಮಕ್ಕಳ ಬೆಳವಣಿಗೆ ಕುಂಠಿತ, ಮಕ್ಕಳ ಕ್ಷೀಣತೆ ಮತ್ತು ಮಕ್ಕಳ ಮರಣ ಎಂಬ ನಾಲ್ಕು ಅಂಶಗಳ ಅರ್ಥವನ್ನು ವಿವರವಾಗಿ ಬರೆದಿದ್ದಾರೆ. ಅಲ್ಲದೆ, ಭಾರತ ಸರ್ಕಾರದ ಮಂತ್ರಿಯಾಗಿರುವ ಪ್ರಭಾವಿ ಮಹಿಳೆಯಾದ ನೀವು ಹಸಿವಿನ ಬಗ್ಗೆ ಅಪಹಾಸ್ಯ ಮಾಡಬೇಡಿ ಎಂದು ಸುಪ್ರಿಯಾ ಅವರು ತಮ್ಮ ಟ್ವೀಟ್ನಲ್ಲಿ ಹೇಳಿದ್ದಾರೆ.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…