ನವದೆಹಲಿ : ಜಾಗತಿಕ ಹಸಿವಿನ ಸೂಚ್ಯಂಕದ ವಿಶ್ವಾಸಾರ್ಹತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆಗಳ ವಿರುದ್ಧ ವಿಪಕ್ಷಗಳು ತೀವ್ರವಾಗಿ ಹರಿಹಾಯ್ದಿದ್ದು, ಸಚಿವೆಯ ಅಜ್ಞಾನವನ್ನು ಟೀಕಿಸಿದೆ.
140 ಕೋಟಿ ಜನರಲ್ಲಿ 3,000 ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು (ಜಿಎಚ್ಐ) ಲೆಕ್ಕ ಹಾಕಲಾಗುತ್ತದೆ. ಈ ವರದಿಯಲ್ಲಿ ಭಾರತಕ್ಕಿಂತ ಪಾಕಿಸ್ತಾನ ಉತ್ತಮ ಸ್ಥಿತಿಯಲ್ಲಿದೆ ಎನ್ನಲಾಗಿದೆ, ಇದನ್ನು ಯಾರಾದರೂ ನಂಬುತ್ತಾರೆಯೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಇರಾನಿ ಅವರು ಹೇಳಿದ್ದರು.
ಶುಕ್ರವಾರ ಹೈದರಾಬಾದ್ನಲ್ಲಿ ನಡೆದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ (ಎಫ್ಐಸಿಸಿಐ) ಸಮ್ಮೇಳನದಲ್ಲಿ ಮಾತನಾಡುತ್ತಾ ಸ್ಮೃತಿ ಇರಾನಿ ಅವರು ಜಾಗತಿಕ ಹಸಿವು ಸೂಚ್ಯಂಕದ ಬಗ್ಗೆ ತಮ್ಮ ಟೀಕೆಗಳನ್ನು ಮಾಡಿದ್ದರು.
ಇರಾನಿ ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇಟ್ ಅವರು, “ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನೆಂದು ನನಗೆ ತಿಳಿದಿಲ್ಲ, ನಿಮ್ಮ ಅಜ್ಞಾನದ ಮಟ್ಟ ಅಥವಾ ನಿಮ್ಮ ಸಂವೇದನಾಶೂನ್ಯತೆಯನ್ನು ನೀವು ಇಲ್ಲಿ ಪ್ರದರ್ಶಿಸಿದ್ದೀರಾ? ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು ಲೆಕ್ಕಹಾಕಲಾಗಿದೆ ಎಂದು ನೀವು ಪ್ರಾಮಾಣಿಕವಾಗಿ ಭಾವಿಸುತ್ತೀರಾ !!???” ಎಂದು ಪ್ರಶ್ನಿಸಿದ್ದಾರೆ.
“ನೀವು ಭಾರತ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದೀರಿ ಎಂದು ಕೇಳಲು ಭಯಾನಕವಾಗಿದೆ!” ಎಂದು ಹೇಳಿದ ಅವರು, ಒಂದು ದೇಶದ ಜಾಗತಿಕ ಹಸಿವಿನ ಸೂಚ್ಯಂಕಕ್ಕೆ ಆಧರಿಸಿದ ನಾಲ್ಕು ಅಂಶಗಳ ಬಗ್ಗೆ ವಿವರಿಸಿದ್ದಾರೆ.
ಅಪೌಷ್ಟಿಕತೆ, ಮಕ್ಕಳ ಬೆಳವಣಿಗೆ ಕುಂಠಿತ, ಮಕ್ಕಳ ಕ್ಷೀಣತೆ ಮತ್ತು ಮಕ್ಕಳ ಮರಣ ಎಂಬ ನಾಲ್ಕು ಅಂಶಗಳ ಅರ್ಥವನ್ನು ವಿವರವಾಗಿ ಬರೆದಿದ್ದಾರೆ. ಅಲ್ಲದೆ, ಭಾರತ ಸರ್ಕಾರದ ಮಂತ್ರಿಯಾಗಿರುವ ಪ್ರಭಾವಿ ಮಹಿಳೆಯಾದ ನೀವು ಹಸಿವಿನ ಬಗ್ಗೆ ಅಪಹಾಸ್ಯ ಮಾಡಬೇಡಿ ಎಂದು ಸುಪ್ರಿಯಾ ಅವರು ತಮ್ಮ ಟ್ವೀಟ್ನಲ್ಲಿ ಹೇಳಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…