ರಾಷ್ಟ್ರೀಯ

ಜಾಗತಿಕ ಹಸಿವು ಸೂಚ್ಯಂಕ ವರದಿ ತಯಾರಿ ಬಗ್ಗೆ ಕೇಂದ್ರ ಸಚಿವೆಯ ಹೇಳಿಕೆಗೆ ಪ್ರತಿಪಕ್ಷಗಳಿಂದ ಆಕ್ಷೇಪ

ನವದೆಹಲಿ : ಜಾಗತಿಕ ಹಸಿವಿನ ಸೂಚ್ಯಂಕದ ವಿಶ್ವಾಸಾರ್ಹತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆಗಳ ವಿರುದ್ಧ ವಿಪಕ್ಷಗಳು ತೀವ್ರವಾಗಿ ಹರಿಹಾಯ್ದಿದ್ದು, ಸಚಿವೆಯ ಅಜ್ಞಾನವನ್ನು ಟೀಕಿಸಿದೆ.

140 ಕೋಟಿ ಜನರಲ್ಲಿ 3,000 ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು (ಜಿಎಚ್‌ಐ) ಲೆಕ್ಕ ಹಾಕಲಾಗುತ್ತದೆ. ಈ ವರದಿಯಲ್ಲಿ ಭಾರತಕ್ಕಿಂತ ಪಾಕಿಸ್ತಾನ ಉತ್ತಮ ಸ್ಥಿತಿಯಲ್ಲಿದೆ ಎನ್ನಲಾಗಿದೆ, ಇದನ್ನು ಯಾರಾದರೂ ನಂಬುತ್ತಾರೆಯೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಇರಾನಿ ಅವರು ಹೇಳಿದ್ದರು.

ಶುಕ್ರವಾರ ಹೈದರಾಬಾದ್‌ನಲ್ಲಿ ನಡೆದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ (ಎಫ್‌ಐಸಿಸಿಐ) ಸಮ್ಮೇಳನದಲ್ಲಿ ಮಾತನಾಡುತ್ತಾ ಸ್ಮೃತಿ ಇರಾನಿ ಅವರು ಜಾಗತಿಕ ಹಸಿವು ಸೂಚ್ಯಂಕದ ಬಗ್ಗೆ ತಮ್ಮ ಟೀಕೆಗಳನ್ನು ಮಾಡಿದ್ದರು.

ಇರಾನಿ ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಶ್ರಿನೇಟ್ ಅವರು, “ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನೆಂದು ನನಗೆ ತಿಳಿದಿಲ್ಲ, ನಿಮ್ಮ ಅಜ್ಞಾನದ ಮಟ್ಟ ಅಥವಾ ನಿಮ್ಮ ಸಂವೇದನಾಶೂನ್ಯತೆಯನ್ನು ನೀವು ಇಲ್ಲಿ ಪ್ರದರ್ಶಿಸಿದ್ದೀರಾ? ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು ಲೆಕ್ಕಹಾಕಲಾಗಿದೆ ಎಂದು ನೀವು ಪ್ರಾಮಾಣಿಕವಾಗಿ ಭಾವಿಸುತ್ತೀರಾ !!???” ಎಂದು ಪ್ರಶ್ನಿಸಿದ್ದಾರೆ.

“ನೀವು ಭಾರತ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದೀರಿ ಎಂದು ಕೇಳಲು ಭಯಾನಕವಾಗಿದೆ!” ಎಂದು ಹೇಳಿದ ಅವರು, ಒಂದು ದೇಶದ ಜಾಗತಿಕ ಹಸಿವಿನ ಸೂಚ್ಯಂಕಕ್ಕೆ ಆಧರಿಸಿದ ನಾಲ್ಕು ಅಂಶಗಳ ಬಗ್ಗೆ ವಿವರಿಸಿದ್ದಾರೆ.

ಅಪೌಷ್ಟಿಕತೆ, ಮಕ್ಕಳ ಬೆಳವಣಿಗೆ ಕುಂಠಿತ, ಮಕ್ಕಳ ಕ್ಷೀಣತೆ ಮತ್ತು ಮಕ್ಕಳ ಮರಣ ಎಂಬ ನಾಲ್ಕು ಅಂಶಗಳ ಅರ್ಥವನ್ನು ವಿವರವಾಗಿ ಬರೆದಿದ್ದಾರೆ. ಅಲ್ಲದೆ, ಭಾರತ ಸರ್ಕಾರದ ಮಂತ್ರಿಯಾಗಿರುವ ಪ್ರಭಾವಿ ಮಹಿಳೆಯಾದ ನೀವು ಹಸಿವಿನ ಬಗ್ಗೆ ಅಪಹಾಸ್ಯ ಮಾಡಬೇಡಿ ಎಂದು ಸುಪ್ರಿಯಾ ಅವರು ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

andolanait

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

3 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

3 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

3 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

3 hours ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

3 hours ago