ನವದೆಹಲಿ : ಜಾಗತಿಕ ಹಸಿವಿನ ಸೂಚ್ಯಂಕದ ವಿಶ್ವಾಸಾರ್ಹತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆಗಳ ವಿರುದ್ಧ ವಿಪಕ್ಷಗಳು ತೀವ್ರವಾಗಿ ಹರಿಹಾಯ್ದಿದ್ದು, ಸಚಿವೆಯ ಅಜ್ಞಾನವನ್ನು ಟೀಕಿಸಿದೆ.
140 ಕೋಟಿ ಜನರಲ್ಲಿ 3,000 ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು (ಜಿಎಚ್ಐ) ಲೆಕ್ಕ ಹಾಕಲಾಗುತ್ತದೆ. ಈ ವರದಿಯಲ್ಲಿ ಭಾರತಕ್ಕಿಂತ ಪಾಕಿಸ್ತಾನ ಉತ್ತಮ ಸ್ಥಿತಿಯಲ್ಲಿದೆ ಎನ್ನಲಾಗಿದೆ, ಇದನ್ನು ಯಾರಾದರೂ ನಂಬುತ್ತಾರೆಯೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಇರಾನಿ ಅವರು ಹೇಳಿದ್ದರು.
ಶುಕ್ರವಾರ ಹೈದರಾಬಾದ್ನಲ್ಲಿ ನಡೆದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ (ಎಫ್ಐಸಿಸಿಐ) ಸಮ್ಮೇಳನದಲ್ಲಿ ಮಾತನಾಡುತ್ತಾ ಸ್ಮೃತಿ ಇರಾನಿ ಅವರು ಜಾಗತಿಕ ಹಸಿವು ಸೂಚ್ಯಂಕದ ಬಗ್ಗೆ ತಮ್ಮ ಟೀಕೆಗಳನ್ನು ಮಾಡಿದ್ದರು.
ಇರಾನಿ ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇಟ್ ಅವರು, “ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನೆಂದು ನನಗೆ ತಿಳಿದಿಲ್ಲ, ನಿಮ್ಮ ಅಜ್ಞಾನದ ಮಟ್ಟ ಅಥವಾ ನಿಮ್ಮ ಸಂವೇದನಾಶೂನ್ಯತೆಯನ್ನು ನೀವು ಇಲ್ಲಿ ಪ್ರದರ್ಶಿಸಿದ್ದೀರಾ? ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು ಲೆಕ್ಕಹಾಕಲಾಗಿದೆ ಎಂದು ನೀವು ಪ್ರಾಮಾಣಿಕವಾಗಿ ಭಾವಿಸುತ್ತೀರಾ !!???” ಎಂದು ಪ್ರಶ್ನಿಸಿದ್ದಾರೆ.
“ನೀವು ಭಾರತ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದೀರಿ ಎಂದು ಕೇಳಲು ಭಯಾನಕವಾಗಿದೆ!” ಎಂದು ಹೇಳಿದ ಅವರು, ಒಂದು ದೇಶದ ಜಾಗತಿಕ ಹಸಿವಿನ ಸೂಚ್ಯಂಕಕ್ಕೆ ಆಧರಿಸಿದ ನಾಲ್ಕು ಅಂಶಗಳ ಬಗ್ಗೆ ವಿವರಿಸಿದ್ದಾರೆ.
ಅಪೌಷ್ಟಿಕತೆ, ಮಕ್ಕಳ ಬೆಳವಣಿಗೆ ಕುಂಠಿತ, ಮಕ್ಕಳ ಕ್ಷೀಣತೆ ಮತ್ತು ಮಕ್ಕಳ ಮರಣ ಎಂಬ ನಾಲ್ಕು ಅಂಶಗಳ ಅರ್ಥವನ್ನು ವಿವರವಾಗಿ ಬರೆದಿದ್ದಾರೆ. ಅಲ್ಲದೆ, ಭಾರತ ಸರ್ಕಾರದ ಮಂತ್ರಿಯಾಗಿರುವ ಪ್ರಭಾವಿ ಮಹಿಳೆಯಾದ ನೀವು ಹಸಿವಿನ ಬಗ್ಗೆ ಅಪಹಾಸ್ಯ ಮಾಡಬೇಡಿ ಎಂದು ಸುಪ್ರಿಯಾ ಅವರು ತಮ್ಮ ಟ್ವೀಟ್ನಲ್ಲಿ ಹೇಳಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…