ಹೊಸದಿಲ್ಲಿ: ಸಂಸತ್ನಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಶುರುವಾಗಿದ್ದು, ವಿಪಕ್ಷಗಳ ಗದ್ದಲ ಕೋಲಾಹಲದಿಂದ ನವೆಂಬರ್ 27ಕ್ಕೆ ಸದನ ಮುಂದೂಡಿಕೆ ಮಾಡಲಾಗಿದೆ.
ಲೋಕಸಭೆಯಲ್ಲಿ ಇಂದು(ನ.25) ವಿರಾಮದ ನಂತರ 12 ಗಂಟೆಗೆ ಸದನ ಸೇರಿದ ಪ್ರತಿಪಕ್ಷದ ಸದಸ್ಯರು ಉತ್ತರ ಪ್ರದೇಶದ ಸಂಭಲ್ನಲ್ಲಿ ಸಂಭವಿಸಿದ ಹಿಂಸಾಚಾರವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಅಲ್ಲದೇ ಅಮೆರಿಕಾ ನ್ಯಾಯಾಲಯದಲ್ಲಿ ಉದ್ಯಮಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಈ ಹಿನ್ನೆಲೆ ಲೋಕಸಭೆಯಲ್ಲಿ ಉಂಟಾದ ಗದ್ದಲಕ್ಕೆ ಕಾರಣವಾಗಿರುವುದರಿಂದ ಲೋಕಸಭೆ ಸಭಾಪತಿ ನವೆಂಬರ್ 27ಕ್ಕೆ ಮುಂದೂಡಿಕೆ ಮಾಡಿದ್ದಾರೆ.
ಲೋಕಸಭೆಯಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ಸದನದಲ್ಲಿ ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಎಸ್ಕೆ ನೂರುಲ್ ಇಸ್ಲಾಂ ಹಾಗೂ ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದಿಂದ ಸದನಕ್ಕೆ ಚುನಾಯಿತರಾಗಿದ್ದ ವಸಂತರಾವ್ ಚವಾಣ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…