ನವದೆಹಲಿ: ಬಿಜೆಪಿ ಸರ್ಕಾರದಿಂದ ದೇಶದಲ್ಲಿ ನಡೆಯುತ್ತಿರುವ ಜನಪರ ಅಭಿವೃದ್ಧಿಯ ಪ್ರಯೋಜನಗಳು ಕ್ರಿಶ್ಚಿಯನ್ ಸಮುದಾಯದ ಅನೇಕ ಜನರನ್ನು, ವಿಶೇಷವಾಗಿ ಬಡವರು ಮತ್ತು ವಂಚಿತರನ್ನು ತಲುಪುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಇಂದು ಕ್ರಿಸ್ಮಸ್ ಪ್ರಯುಕ್ತ ದೇಶದ ಜನರಿಗೆ ಶುಭಾಶಯ ತಿಳಿಸಿ, ಕಲ್ಯಾಣ್ ಮಾರ್ಗ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೇಸು ಕ್ರಿಸ್ತನು ಸಹಾನುಭೂತಿ ಮತ್ತು ಸೇವೆಯ ಮೌಲ್ಯಗಳನ್ನು ಜೀವಿಸಿದರು. ಎಲ್ಲರಿಗೂ ನ್ಯಾಯವಿರುವ ಸಮಾಜವನ್ನು ರಚಿಸಲು ಅವರು ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.
ಕೆಲವು ವರ್ಷಗಳ ಹಿಂದೆ ಪೋಪ್ ಅವರನ್ನು ಭೇಟಿಯಾಗಿದ್ದೆ, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದೇವು. ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮಂತ್ರವನ್ನು ನಂಬುತ್ತೇವೆ. ನಮ್ಮ ಸರ್ಕಾರದ ಅಭಿವೃದ್ಧಿಯ ಪ್ರಯೋಜನಗಳು ಹಿಂದುಳಿದವರಿಗೆ ಸಕಾಲದಲ್ಲಿ ಎಲ್ಲರಿಗೂ ತಲುಪುವಂತೆ ಮಾಡಿದ್ದೇವೆ. ಅದರಿಂದ ಯಾರು ವಂಚಿತರಾಗಬಾರದು ಎಂದು ಹೇಳಿದರು.
ಭಾರತ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವತ್ತ ಸಾಗುತ್ತಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯೊಂದಿಗೆ ಸರ್ಕಾರವು ತನ್ನ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದೆ. ಈಗಾಗಲೇ ಅದಕ್ಕೆ ವೇಗವನ್ನು ಕೇಂದ್ರ ಸರ್ಕಾರ ನೀಡಿದೆ. ಹಾಗಾಗಿ ನಾವು ಮುಂದಿನ ಪೀಳಿಗೆಗೆ ಒಳ್ಳೆಯ ಮತ್ತು ಉತ್ತಮವಾದ ಉಡುಗೊರೆಯನ್ನು ನೀಡಬೇಕಿದೆ, ಅವರಿಗೊಂದು ಉತ್ತಮ ಹಾದಿಯನ್ನು ಮತ್ತು ಮಾರ್ಗದರ್ಶವನ್ನು ನೀಡಬೇಕಿದೆ ಇದುವೇ ಕ್ರಿಸ್ಮಸ್ಗೆ ಉಡುಗೊರೆ ನೀಡುವ ಕ್ರಮವಾಗಿದೆ ಎಂದು ಅವರು ತಿಳಿಸಿದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…