ನವದೆಹಲಿ: ಬಿಜೆಪಿ ಸರ್ಕಾರದಿಂದ ದೇಶದಲ್ಲಿ ನಡೆಯುತ್ತಿರುವ ಜನಪರ ಅಭಿವೃದ್ಧಿಯ ಪ್ರಯೋಜನಗಳು ಕ್ರಿಶ್ಚಿಯನ್ ಸಮುದಾಯದ ಅನೇಕ ಜನರನ್ನು, ವಿಶೇಷವಾಗಿ ಬಡವರು ಮತ್ತು ವಂಚಿತರನ್ನು ತಲುಪುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಇಂದು ಕ್ರಿಸ್ಮಸ್ ಪ್ರಯುಕ್ತ ದೇಶದ ಜನರಿಗೆ ಶುಭಾಶಯ ತಿಳಿಸಿ, ಕಲ್ಯಾಣ್ ಮಾರ್ಗ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೇಸು ಕ್ರಿಸ್ತನು ಸಹಾನುಭೂತಿ ಮತ್ತು ಸೇವೆಯ ಮೌಲ್ಯಗಳನ್ನು ಜೀವಿಸಿದರು. ಎಲ್ಲರಿಗೂ ನ್ಯಾಯವಿರುವ ಸಮಾಜವನ್ನು ರಚಿಸಲು ಅವರು ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.
ಕೆಲವು ವರ್ಷಗಳ ಹಿಂದೆ ಪೋಪ್ ಅವರನ್ನು ಭೇಟಿಯಾಗಿದ್ದೆ, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದೇವು. ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮಂತ್ರವನ್ನು ನಂಬುತ್ತೇವೆ. ನಮ್ಮ ಸರ್ಕಾರದ ಅಭಿವೃದ್ಧಿಯ ಪ್ರಯೋಜನಗಳು ಹಿಂದುಳಿದವರಿಗೆ ಸಕಾಲದಲ್ಲಿ ಎಲ್ಲರಿಗೂ ತಲುಪುವಂತೆ ಮಾಡಿದ್ದೇವೆ. ಅದರಿಂದ ಯಾರು ವಂಚಿತರಾಗಬಾರದು ಎಂದು ಹೇಳಿದರು.
ಭಾರತ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವತ್ತ ಸಾಗುತ್ತಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯೊಂದಿಗೆ ಸರ್ಕಾರವು ತನ್ನ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದೆ. ಈಗಾಗಲೇ ಅದಕ್ಕೆ ವೇಗವನ್ನು ಕೇಂದ್ರ ಸರ್ಕಾರ ನೀಡಿದೆ. ಹಾಗಾಗಿ ನಾವು ಮುಂದಿನ ಪೀಳಿಗೆಗೆ ಒಳ್ಳೆಯ ಮತ್ತು ಉತ್ತಮವಾದ ಉಡುಗೊರೆಯನ್ನು ನೀಡಬೇಕಿದೆ, ಅವರಿಗೊಂದು ಉತ್ತಮ ಹಾದಿಯನ್ನು ಮತ್ತು ಮಾರ್ಗದರ್ಶವನ್ನು ನೀಡಬೇಕಿದೆ ಇದುವೇ ಕ್ರಿಸ್ಮಸ್ಗೆ ಉಡುಗೊರೆ ನೀಡುವ ಕ್ರಮವಾಗಿದೆ ಎಂದು ಅವರು ತಿಳಿಸಿದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…