ರಾಷ್ಟ್ರೀಯ

ಸಂಸತ್‌ ಭದ್ರತಾ ಲೋಪ: ಬೆಂಕಿ ಹಚ್ಚಿಕೊಳ್ಳಲು ಯೋಜನೆ ಹಾಕಿದ್ದ ಸಾಗರ್‌ ಶರ್ಮಾ!

ಸಂಸತ್‌ ಭವನದಲ್ಲಿ ಕಿಡಿಗೇಡಿಗಳು ಹೊಗೆ ಡಬ್ಬಿ ದಾಳಿ ನಡೆಸಿದ್ದು ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ಅಡಿಯಲ್ಲಿ ಈಗಾಗಲೇ ಒಟ್ಟು 6 ಮಂದಿಯನ್ನು ದೆಹಲಿ ಪೊಲೀಸ್‌ ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ.

ಈ ವಿಚಾರಣೆಯಲ್ಲಿ ಹಲವು ಹೊಸ ಹೊಸ ಸುದ್ದಿಗಳು ಹೊರಬೀಳುತ್ತಿದ್ದು, ಇದೀಗ ಈ ಪೈಕಿ ಮೈಸೂರಿನ ಮನೋರಂಜನ್‌ ಜತೆ ಸಂಸತ್‌ ಒಳಗೆ ಹೊಗೆ ಡಬ್ಬಿ ದಾಳಿ ನಡೆಸಿದ್ದ ಸಾಗರ್‌ ಶರ್ಮಾ ತನಿಖೆ ವೇಳೆ ತಾನು ಸಂಸತ್‌ ಎದುರು ಬೆಂಕಿ ಹಚ್ಚಿಕೊಳ್ಳಲು ಯೋಜನೆ ಹಾಕಿದ್ದೆ ಎಂಬ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾನೆ.

ಆನ್‌ಲೈನ್‌ನಲ್ಲಿ ಒಂದು ಜೆಲ್‌ ಸಿಗುತ್ತೆ, ಅದನ್ನು ಬಳಸಿದ್ದರೆ ಬೆಂಕಿಯಿಂದ ದೇಹಕ್ಕೆ ಹಾನಿಯಾಗುವುದಿಲ್ಲ, ಆದರೆ ಆನ್‌ಲೈನ್‌ ಪೇಮೆಂಟ್‌ ಕೆಲಸ ನಿರ್ವಹಿಸದ ಕಾರಣ ಅದನ್ನು ಖರೀದಿಸಲಾಗಲಿಲ್ಲ, ಹೀಗಾಗಿ ಆ ಯೋಜನೆಯನ್ನು ಕೈಬಿಟ್ಟೆವು ಎಂದು ಸಾಗರ್‌ ಶರ್ಮಾ ಹೇಳಿದ್ದಾರೆ.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

2 hours ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

12 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

12 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

13 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

13 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

13 hours ago