ರಾಷ್ಟ್ರೀಯ

ಸಂಸತ್‌ ಭದ್ರತಾ ಲೋಪ: 6 ಆರೋಪಿಗಳ ಪಾಲಿಗ್ರಾಫ್‌ ಪರೀಕ್ಷೆಗೆ ಅರ್ಜಿ; ವಿಚಾರಣೆ ಮುಂದೂಡಿದ ಕೋರ್ಟ್

ಡಿ.13ರಂದು ನಡೆದ ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರು ಆರೋಪಿಗಳ ಪಾಲಿಗ್ರಾಫ್ ಪರೀಕ್ಷೆ ನಡೆಸಲು ದೆಹಲಿ ಪೊಲೀಸರು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಪಾಟಿಯಾಲ ಹೌಸ್ ಕೋರ್ಟ್ ಜನವರಿ 5ಕ್ಕೆ ಮುಂದೂಡಿದೆ.

ಪಾಲಿಗ್ರಾಫ್‌ ಪರೀಕ್ಷೆಯನ್ನು ಸಾಮಾನ್ಯವಾಗಿ ಸುಳ್ಳು ಪತ್ತೆ ಹಚ್ಚುವ ಪರೀಕ್ಷೆ ಎಂದೂ ಸಹ ಕರೆಯಲಾಗುತ್ತದೆ. ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಕೇಳಲಾಗುವ ಸರಣಿ ಪ್ರಶ್ನೆಗಳಿಗೆ ಆತ ಉತ್ತರಿಸುವಾಗ ಆತನ ರಕ್ತದೊತ್ತಡ, ನಾಡಿಮಿಡಿತ ಮತ್ತು ಉಸಿರಾಟದ ಪ್ರಮಾಣವನ್ನು ದಾಖಲಿಸಲಾಗುತ್ತದೆ.

ಬಂಧಿತ ಆರೋಪಿಗಳಾದ ಮನೋರಂಜನ್‌, ಸಾಗರ್‌ ಶರ್ಮಾ, ಅಮೋಲ್‌ ಶಿಂಧೆ, ನೀಲಮ್‌ ದೇವಿ, ಲಲಿತ್‌ ಝಾ ಹಾಗೂ ಮಹೇಶ್‌ ಕುಮಾವತ್‌ ಅವರನ್ನು ದೆಹಲಿ ಪೊಲೀಸರು ಡಿಸೆಂಬರ್‌ 16ರಿಂದ ವ್ಯಾಪಕವಾಗಿ ವಿಚಾರಣೆ ನಡೆಸುತ್ತಾ ಬಂದಿದ್ದು, ಆರೋಪಿಗಳು ಪೊಲೀಸರಿಗೆ ಹೆಚ್ಚೇನೂ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಹೀಗೆ ತಮ್ಮ ಪ್ರಶ್ನೆಗಳಿಗೆ ಉತ್ತರ ಸಿಗದ ಕಾರಣ ಪೊಲೀಸರು ಎಲ್ಲಾ ಆರೋಪಿಗಳನ್ನು ಪಾಲಿಗ್ರಾಫ್‌ ಪರೀಕ್ಷೆಗೆ ಒಳಪಡಿಸಬೇಕೆಂದು ಅರ್ಜಿ ಸಲ್ಲಿಸಿದೆ.

ಈ ಅರ್ಜಿಯನ್ನು ಕೈಗೆತ್ತಿಕೊಂಡ ಪಾಟಿಯಾಲ‌ ಹೌಸ್‌ ಕೋರ್ಟ್‌ನ ಹೆಚ್ಚುವರಿ ಸೆಷನ್‌ ಕೋರ್ಟ್‌ನ ನ್ಯಾಯಾಧೀಶ ಹರ್ದೀಪ್‌ ಕೌರ್‌ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿದರು. ಅಲ್ಲದೇ ನೀಲಂ ದೇವಿಯ ಜಾಮೀನು ಅರ್ಜಿಯ ಕುರಿತು ಜನವರಿ 10ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದ್ದಾರೆ.

andolana

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

4 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

4 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

5 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

5 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

5 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

6 hours ago