ಡಿ.13ರಂದು ನಡೆದ ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರು ಆರೋಪಿಗಳ ಪಾಲಿಗ್ರಾಫ್ ಪರೀಕ್ಷೆ ನಡೆಸಲು ದೆಹಲಿ ಪೊಲೀಸರು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಪಾಟಿಯಾಲ ಹೌಸ್ ಕೋರ್ಟ್ ಜನವರಿ 5ಕ್ಕೆ ಮುಂದೂಡಿದೆ.
ಪಾಲಿಗ್ರಾಫ್ ಪರೀಕ್ಷೆಯನ್ನು ಸಾಮಾನ್ಯವಾಗಿ ಸುಳ್ಳು ಪತ್ತೆ ಹಚ್ಚುವ ಪರೀಕ್ಷೆ ಎಂದೂ ಸಹ ಕರೆಯಲಾಗುತ್ತದೆ. ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಕೇಳಲಾಗುವ ಸರಣಿ ಪ್ರಶ್ನೆಗಳಿಗೆ ಆತ ಉತ್ತರಿಸುವಾಗ ಆತನ ರಕ್ತದೊತ್ತಡ, ನಾಡಿಮಿಡಿತ ಮತ್ತು ಉಸಿರಾಟದ ಪ್ರಮಾಣವನ್ನು ದಾಖಲಿಸಲಾಗುತ್ತದೆ.
ಬಂಧಿತ ಆರೋಪಿಗಳಾದ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ದೇವಿ, ಲಲಿತ್ ಝಾ ಹಾಗೂ ಮಹೇಶ್ ಕುಮಾವತ್ ಅವರನ್ನು ದೆಹಲಿ ಪೊಲೀಸರು ಡಿಸೆಂಬರ್ 16ರಿಂದ ವ್ಯಾಪಕವಾಗಿ ವಿಚಾರಣೆ ನಡೆಸುತ್ತಾ ಬಂದಿದ್ದು, ಆರೋಪಿಗಳು ಪೊಲೀಸರಿಗೆ ಹೆಚ್ಚೇನೂ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಹೀಗೆ ತಮ್ಮ ಪ್ರಶ್ನೆಗಳಿಗೆ ಉತ್ತರ ಸಿಗದ ಕಾರಣ ಪೊಲೀಸರು ಎಲ್ಲಾ ಆರೋಪಿಗಳನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಬೇಕೆಂದು ಅರ್ಜಿ ಸಲ್ಲಿಸಿದೆ.
ಈ ಅರ್ಜಿಯನ್ನು ಕೈಗೆತ್ತಿಕೊಂಡ ಪಾಟಿಯಾಲ ಹೌಸ್ ಕೋರ್ಟ್ನ ಹೆಚ್ಚುವರಿ ಸೆಷನ್ ಕೋರ್ಟ್ನ ನ್ಯಾಯಾಧೀಶ ಹರ್ದೀಪ್ ಕೌರ್ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿದರು. ಅಲ್ಲದೇ ನೀಲಂ ದೇವಿಯ ಜಾಮೀನು ಅರ್ಜಿಯ ಕುರಿತು ಜನವರಿ 10ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…