ರಾಷ್ಟ್ರೀಯ

ಸಂಸತ್ ಭದ್ರತಾ ಲೋಪ: ಪಾಲಿಗ್ರಾಫ್ ಪರೀಕ್ಷೆಗೆ ಅನುಮತಿ ಕೋರಿದ ದೆಹಲಿ ಪೊಲೀಸರು

ನವದೆಹಲಿ: ಡಿಸೆಂಬರ್‌ 13ರಂದು ಲೋಕಸಭಾ ಕಲಾಪದ ವೇಳೆ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಲ್ಲಾ ಆರು ಮಂದಿ ಆರೋಪಿಗಳಿಗೆ ಪಾಲಿಗ್ರಾಫ್ ಪರೀಕ್ಷೆಯನ್ನು (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಅನುಮತಿ ಕೋರಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರ ಮುಂದೆ ಅರ್ಜಿ ಸಲ್ಲಿಸಲಾಯಿತು. ಕೆಲವು ಆರೋಪಿಗಳನ್ನು ಪ್ರತಿನಿಧಿಸುವ ವಕೀಲರು ಹಾಜರಾಗಿರಲಿಲ್ಲದ ಕಾರಣ ಅವರು ಜನವರಿ 2ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದ್ದಾರೆ.

ಅರ್ಜಿ ವಿಚಾರಣೆ ವೇಳೆ ಎಲ್ಲಾ ಆರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ ಪೊಲೀಸರು ಪಾಲಿಗ್ರಾಫ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಿದರು. ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂಧೆ, ನೀಲಂ ದೇವಿ, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಸದ್ಯ ಜನವರಿ 5 ರವರೆಗೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಸಂಸತ್‌ ಮೇಲಿನ ದಾಳಿಯನ್ನು ಉತ್ತಮವಾಗಿ ಸಂಯೋಜಿಸಲಾಗಿದೆ. ದಾಳಿಯ ಹಿಂದಿನ ನಿಜವಾದ ಉದ್ದೇಶ ಮತ್ತು ಅವರು ಯಾವುದೇ ಶತ್ರು ದೇಶ ಅಥವಾ ಭಯೋತ್ಪಾದಕ ಸಂಘಟನೆಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿದ್ದಾರೆಯೇ ಎಂಬುದರ ಬಗ್ಗೆ ತಿಳಿದುಕೊಳ್ಳಲು ಆರೋಪಿಗಳ ಕಸ್ಟಡಿ ವಿಚಾರಣೆಯ ಅಗತ್ಯವಿದೆ ಎಂದು ದೆಹಲಿ ಪೊಲೀಸರನ್ನು ಪ್ರತಿನಿಧಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಅಖಂಡ ಪ್ರತಾಪ್ ಸಿಂಗ್,ಈ ಹಿಂದೆ ನ್ಯಾಯಾಲಯಕ್ಕೆ ಹೇಳಿದ್ದರು.

2001ರ ಸಂಸತ್ತಿನ ಭಯೋತ್ಪಾದಕ ದಾಳಿಯನ್ನು ನೆನಪಿಸುವ ಡಿಸೆಂಬರ್ 13 ರಂದು ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪವಾಗಿತ್ತು. ಕಲಾಪ ನಡೆಯುತ್ತಿರುವಾಗಲೇ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್ ಎಂಬ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ ‘ಸ್ಮೋಕ್ ಕ್ಯಾನ್’ ಹಾರಿಸಿದ್ದರು. ಇದು ದೇಶಾದ್ಯಂತ ಸಂಚಲನವನ್ನೇ ಸೃಷ್ಟಿಸಿತ್ತು.

andolanait

Recent Posts

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

3 mins ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

8 mins ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

11 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

11 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

11 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

11 hours ago