ನವದೆಹಲಿ : ಡಿಸೆಂಬರ್ ೧೩ (ಅಧಿವೇಶನದ ೮ ನೇ ದಿನ) ರಂದು ಸಂಸತ್ ಭದ್ರತೆ ಉಲ್ಲಂಘಿಸಿದ ೬ ಜನರ ಪೈಕಿ ಐವರ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಹಳೇ ಸಂಸತ್ ಮೇಲೆ ೨೧ ವರ್ಷಗಳ ಹಿಂದೆ ಉಗ್ರರು ದಾಳಿ ನಡೆಸಿದ್ದರು. ಅದೇ ದಿನವಾದ ಬುಧವಾರ ನೂತನ ಸಂಸತ್ ಮೇಲೆ ಕಲಾಪದ ವೇಳೆಯಲ್ಲಿ, ಇಬ್ಬರು ಪ್ರೇಕ್ಷಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು, ಘೋಷಣೆ ಕೂಗತೊಡಗಿದರು. ಅಲ್ಲದೇ ಹಳದಿ ಬಣ್ಣದ ಸ್ಮೋಕ್ ಕ್ಯಾನ್ಗಳನ್ನು ಹರಡಿದ್ದರು. ಈ ಇಬ್ಬರನ್ನು ತಕ್ಷಣವೇ ಪೊಲೀಸರು ಬಂಧಿಸಿದ್ದರು.
ಲೋಕಸಭೆಯ ಭದ್ರತೆಯನ್ನು ಉಲ್ಲಂಘಿಸಿದವರ ವಿರುದ್ಧ ಯುಎಪಿಎ ( ಲೋಕಸಭಾ ಭದ್ರತಾ ಉಲ್ಲಂಘನೆ) ಅಡಿಯಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇವರೆಲ್ಲರು ಭಗತ್ ಸಿಂಗ್ ಫ್ಯಾನ್ ಕ್ಲಬ್ ಎಂಬ ಸಾಮಾಜಿಕ ಜಾಲತಾಣದಲ್ಲಿನ ಪೇಜ್ನಲ್ಲಿ ಸಂಬಂಧ ಹೊಂದಿದ್ದರು. ಮೈಸೂರಿನಲ್ಲಿ ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಎಲ್ಲರೂ ಭೇಟಿಯಾಗಿದ್ದರು. ಕಳೆದ ೯ ತಿಂಗಳ ಹಿಂದೆ ಸಂಸತ್ ಪ್ರವೇಶಿಸುವ ಬಗ್ಗೆ ಭೆಟಿಯಾಗಿ ಚರ್ಚಿಸಿದ್ದರು. ಡಿಸೆಂಬರ್ ೧೦ ರಂದು ಎಲ್ಲರೂ ತಮ್ಮ ತಮ್ಮ ರಾಜ್ಯಗಳಿಂದ ಹೊರಟು ದೆಹಲಿ ತಲುಪಿದರು. ದೆಹಲಿಯ ಗುರುಗ್ರಾಮ್ನಲ್ಲಿರುವ ವಿಕ್ಕಿ ಅವರ ಮನೆಯಲ್ಲಿ ಉಳಿದುಕೊಂಡರು. ಇದರಲ್ಲಿ ಅಮೋಲ್ ಮಹಾರಾಷ್ಟ್ರದಿಂದ ಸ್ಮೋಕ್ ಬಾಂಬ್ ತಂದಿದ್ದ ಎನ್ನಲಾಗಿದೆ.
ಈ ಎಲ್ಲಾ ಐವರು ಇಂಡಿಯಾ ಗೇಟ್ ಬಳಿ ಭೇಟಿಯಾಗಿದ್ದರು. ಅಲ್ಲಿ ಬಣ್ಣದ ಪಟಾಕಿಗಳನ್ನು ಖರೀದಿಸಿದರು. ನಂತರ ೧೨ ಗಂಟೆಗೆ ಪ್ರವೇಶಿಸಿ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಸ್ಮೋಕ್ ಕ್ಯಾನ್ ತೆಗೆದರು. ಅಲ್ಲದೇ ಮತ್ತೊಬ್ಬ ಸದನದಲ್ಲಿ ಹಳದಿ ಬಣ್ಣ ಎರಚಿದನು.
೨೦೦೧ರ ಡಿಸೆಂಬರ್ ನಲ್ಲಿ ನಡೆದ ಉಗ್ರರ ದಾಳಿಯ ನಡುವೆ ಈ ಭದ್ರತಾ ಲೋಪ ಕಂಡುಬಂದಿದೆ. ಸಂಸತ್ ನಲ್ಲಿ ೪ ಲೇಯರ್ ಭದ್ರತೆ ಇದ್ದೂ ಸಹಾ ಅದನ್ನು ಬೇಧಿಸಿ ಈ ಘಟನೆ ನಡೆದದ್ದು ಹೇಗೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಇದಲ್ಲದೇ ಜುಲೈನಲ್ಲಿ ನಡೆದ ಸದನಕ್ಕೆ ಭೇಟಿ ನೀಡಲು ಲಕ್ನೋ ದಿಂದ ಸಾಗ್ ಶರ್ಮಾ ಅವರು ಬಂದಿದ್ದರು, ಆದರೆ ಒಳಗೆ ಪ್ರವೇಶ ನಿರಾಕರಿಸಿದ ಹಿನ್ನಲೆಯಲ್ಲಿ ಹೊರಗೆ ನಿಂತು ಸದನ ವೀಕ್ಷಿಸಿ ವಾಪಾಸ್ಸಾಗಿದ್ದ ಎನ್ನಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…