ರಾಷ್ಟ್ರೀಯ

ವಿಮಾನ ವಿಳಂಬದ ಬಗ್ಗೆ ಮಾಹಿತಿ ನೀಡುವಾಗ ಪೈಲೆಟ್‌ ಮೇಲೆ ಪ್ರಯಾಣಿಕ ಹಲ್ಲೆ!

ನವದೆಹಲಿ: ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ವಿಮಾನಗ ಳ ಸಂಚಾರಲದಲ್ಲಿ ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಗೋ ವಿಮಾನದ ಪೈಲಟ್ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನು ತನ್ನ ಸೀಟಿನಿಂದ ಧಾವಿಸಿ ದೈಹಿಕವಾಗಿ ಹಲ್ಲೆ ಮಾಡಿದ್ದಾನೆ.

ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಹಳದಿ ಡ್ರೆಸ್ ಧರಿಸಿದ್ದ ವ್ಯಕ್ತಿಯೊಬ್ಬರು ಕೊನೆಯ ಸಾಲಿನಿಂದ ಏಕಾಏಕಿ ಧಾವಿಸಿ ಪೈಲಟ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವ್ಯಕ್ತಿ ಕ್ಯಾಪ್ಟನ್ ಮೇಲೆ ಹಲ್ಲೆ ಮಾಡಿದ ನಂತರ, ಇನ್ನೊಬ್ಬ ಸಿಬ್ಬಂದಿ ಕಣ್ಣೀರು ಸುರಿಸುತ್ತಾ ಪ್ರಯಾಣಿಕರಿಗೆ ನೀವು ಈ ರೀತಿ ಮಾಡುವಂತಿಲ್ಲ ಎಂದು ಹೇಳುವುದನ್ನು ಕಾಣಬಹುದು.

ವಿಡಿಯೋ ವೈರಲ್ ಆದ ನಂತರ, ಸಾಮಾಜಿಕ ಮಾಧ್ಯಮ ಬಳಕೆದಾರರು ಪೈಲಟ್ ಮೇಲೆ ದೈಹಿಕ ಹಲ್ಲೆ ಮಾಡಿದ ಪ್ರಯಾಣಿಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಹಲವಾರು ವಿಮಾನಗಳು ವಿಳಂಬವಾಗಿವೆ. ಇಂಡಿಗೋ ಸಹ ಅಡೆತಡೆಗಳ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ. ಉತ್ತರ ಭಾರತದಾದ್ಯಂತ ಕಡಿಮೆ ಗೋಚರತೆ ಮತ್ತು ದಟ್ಟವಾದ ಮಂಜು ಪರಿಸ್ಥಿತಿಗಳಿಂದಾಗಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ.

ನಮ್ಮ ಸಿಬ್ಬಂದಿ ವಿವಿಧ ವಿಮಾನ ನಿಲ್ದಾಣಗಳಲ್ಲಿನ ವಿಳಂಬ ಮತ್ತು ರದ್ದತಿಗಳ ಬಗ್ಗೆ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.

ನಮ್ಮ ಪ್ರಯಾಣಿಕರಿಗೆ ಉಂಟಾದ ಯಾವುದೇ ಅನಾನುಕೂಲತೆಗಾಗಿ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದೆ.

andolanait

Recent Posts

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…

9 mins ago

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…

13 mins ago

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…

25 mins ago

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…

59 mins ago

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…

1 hour ago

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

3 hours ago