ನವದೆಹಲಿ: ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ವಿಮಾನಗ ಳ ಸಂಚಾರಲದಲ್ಲಿ ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಗೋ ವಿಮಾನದ ಪೈಲಟ್ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನು ತನ್ನ ಸೀಟಿನಿಂದ ಧಾವಿಸಿ ದೈಹಿಕವಾಗಿ ಹಲ್ಲೆ ಮಾಡಿದ್ದಾನೆ.
ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಹಳದಿ ಡ್ರೆಸ್ ಧರಿಸಿದ್ದ ವ್ಯಕ್ತಿಯೊಬ್ಬರು ಕೊನೆಯ ಸಾಲಿನಿಂದ ಏಕಾಏಕಿ ಧಾವಿಸಿ ಪೈಲಟ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ವ್ಯಕ್ತಿ ಕ್ಯಾಪ್ಟನ್ ಮೇಲೆ ಹಲ್ಲೆ ಮಾಡಿದ ನಂತರ, ಇನ್ನೊಬ್ಬ ಸಿಬ್ಬಂದಿ ಕಣ್ಣೀರು ಸುರಿಸುತ್ತಾ ಪ್ರಯಾಣಿಕರಿಗೆ ನೀವು ಈ ರೀತಿ ಮಾಡುವಂತಿಲ್ಲ ಎಂದು ಹೇಳುವುದನ್ನು ಕಾಣಬಹುದು.
ವಿಡಿಯೋ ವೈರಲ್ ಆದ ನಂತರ, ಸಾಮಾಜಿಕ ಮಾಧ್ಯಮ ಬಳಕೆದಾರರು ಪೈಲಟ್ ಮೇಲೆ ದೈಹಿಕ ಹಲ್ಲೆ ಮಾಡಿದ ಪ್ರಯಾಣಿಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಹಲವಾರು ವಿಮಾನಗಳು ವಿಳಂಬವಾಗಿವೆ. ಇಂಡಿಗೋ ಸಹ ಅಡೆತಡೆಗಳ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ. ಉತ್ತರ ಭಾರತದಾದ್ಯಂತ ಕಡಿಮೆ ಗೋಚರತೆ ಮತ್ತು ದಟ್ಟವಾದ ಮಂಜು ಪರಿಸ್ಥಿತಿಗಳಿಂದಾಗಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ.
ನಮ್ಮ ಸಿಬ್ಬಂದಿ ವಿವಿಧ ವಿಮಾನ ನಿಲ್ದಾಣಗಳಲ್ಲಿನ ವಿಳಂಬ ಮತ್ತು ರದ್ದತಿಗಳ ಬಗ್ಗೆ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.
ನಮ್ಮ ಪ್ರಯಾಣಿಕರಿಗೆ ಉಂಟಾದ ಯಾವುದೇ ಅನಾನುಕೂಲತೆಗಾಗಿ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…