ನವದೆಹಲಿ: ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ವಿಮಾನಗ ಳ ಸಂಚಾರಲದಲ್ಲಿ ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಗೋ ವಿಮಾನದ ಪೈಲಟ್ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನು ತನ್ನ ಸೀಟಿನಿಂದ ಧಾವಿಸಿ ದೈಹಿಕವಾಗಿ ಹಲ್ಲೆ ಮಾಡಿದ್ದಾನೆ.
ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಹಳದಿ ಡ್ರೆಸ್ ಧರಿಸಿದ್ದ ವ್ಯಕ್ತಿಯೊಬ್ಬರು ಕೊನೆಯ ಸಾಲಿನಿಂದ ಏಕಾಏಕಿ ಧಾವಿಸಿ ಪೈಲಟ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ವ್ಯಕ್ತಿ ಕ್ಯಾಪ್ಟನ್ ಮೇಲೆ ಹಲ್ಲೆ ಮಾಡಿದ ನಂತರ, ಇನ್ನೊಬ್ಬ ಸಿಬ್ಬಂದಿ ಕಣ್ಣೀರು ಸುರಿಸುತ್ತಾ ಪ್ರಯಾಣಿಕರಿಗೆ ನೀವು ಈ ರೀತಿ ಮಾಡುವಂತಿಲ್ಲ ಎಂದು ಹೇಳುವುದನ್ನು ಕಾಣಬಹುದು.
ವಿಡಿಯೋ ವೈರಲ್ ಆದ ನಂತರ, ಸಾಮಾಜಿಕ ಮಾಧ್ಯಮ ಬಳಕೆದಾರರು ಪೈಲಟ್ ಮೇಲೆ ದೈಹಿಕ ಹಲ್ಲೆ ಮಾಡಿದ ಪ್ರಯಾಣಿಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಹಲವಾರು ವಿಮಾನಗಳು ವಿಳಂಬವಾಗಿವೆ. ಇಂಡಿಗೋ ಸಹ ಅಡೆತಡೆಗಳ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ. ಉತ್ತರ ಭಾರತದಾದ್ಯಂತ ಕಡಿಮೆ ಗೋಚರತೆ ಮತ್ತು ದಟ್ಟವಾದ ಮಂಜು ಪರಿಸ್ಥಿತಿಗಳಿಂದಾಗಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ.
ನಮ್ಮ ಸಿಬ್ಬಂದಿ ವಿವಿಧ ವಿಮಾನ ನಿಲ್ದಾಣಗಳಲ್ಲಿನ ವಿಳಂಬ ಮತ್ತು ರದ್ದತಿಗಳ ಬಗ್ಗೆ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.
ನಮ್ಮ ಪ್ರಯಾಣಿಕರಿಗೆ ಉಂಟಾದ ಯಾವುದೇ ಅನಾನುಕೂಲತೆಗಾಗಿ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…