ನವದೆಹಲಿ: ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ವಿಮಾನಗ ಳ ಸಂಚಾರಲದಲ್ಲಿ ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಗೋ ವಿಮಾನದ ಪೈಲಟ್ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನು ತನ್ನ ಸೀಟಿನಿಂದ ಧಾವಿಸಿ ದೈಹಿಕವಾಗಿ ಹಲ್ಲೆ ಮಾಡಿದ್ದಾನೆ.
ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಹಳದಿ ಡ್ರೆಸ್ ಧರಿಸಿದ್ದ ವ್ಯಕ್ತಿಯೊಬ್ಬರು ಕೊನೆಯ ಸಾಲಿನಿಂದ ಏಕಾಏಕಿ ಧಾವಿಸಿ ಪೈಲಟ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ವ್ಯಕ್ತಿ ಕ್ಯಾಪ್ಟನ್ ಮೇಲೆ ಹಲ್ಲೆ ಮಾಡಿದ ನಂತರ, ಇನ್ನೊಬ್ಬ ಸಿಬ್ಬಂದಿ ಕಣ್ಣೀರು ಸುರಿಸುತ್ತಾ ಪ್ರಯಾಣಿಕರಿಗೆ ನೀವು ಈ ರೀತಿ ಮಾಡುವಂತಿಲ್ಲ ಎಂದು ಹೇಳುವುದನ್ನು ಕಾಣಬಹುದು.
ವಿಡಿಯೋ ವೈರಲ್ ಆದ ನಂತರ, ಸಾಮಾಜಿಕ ಮಾಧ್ಯಮ ಬಳಕೆದಾರರು ಪೈಲಟ್ ಮೇಲೆ ದೈಹಿಕ ಹಲ್ಲೆ ಮಾಡಿದ ಪ್ರಯಾಣಿಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಹಲವಾರು ವಿಮಾನಗಳು ವಿಳಂಬವಾಗಿವೆ. ಇಂಡಿಗೋ ಸಹ ಅಡೆತಡೆಗಳ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ. ಉತ್ತರ ಭಾರತದಾದ್ಯಂತ ಕಡಿಮೆ ಗೋಚರತೆ ಮತ್ತು ದಟ್ಟವಾದ ಮಂಜು ಪರಿಸ್ಥಿತಿಗಳಿಂದಾಗಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ.
ನಮ್ಮ ಸಿಬ್ಬಂದಿ ವಿವಿಧ ವಿಮಾನ ನಿಲ್ದಾಣಗಳಲ್ಲಿನ ವಿಳಂಬ ಮತ್ತು ರದ್ದತಿಗಳ ಬಗ್ಗೆ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.
ನಮ್ಮ ಪ್ರಯಾಣಿಕರಿಗೆ ಉಂಟಾದ ಯಾವುದೇ ಅನಾನುಕೂಲತೆಗಾಗಿ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದೆ.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…