ರಾಷ್ಟ್ರೀಯ

ರೈಲುಗಳಿಗೆ ಚಾಲನೆ ನೀಡುವುದರಲ್ಲಿರುವ ಉತ್ಸಾಹ ಸುರಕ್ಷತೆ ನೀಡುವುದರಲ್ಲೂ ತೋರಿಸಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಆಂಧ್ರಪ್ರದೇಶ ಸಂಭವಿಸಿದು ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, “ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರೈಲು ಹಳಿತಪ್ಪಿ ಸಂಭವಿಸಿರುವ ದುರಂತದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ, ದುರ್ಘಟನೆಯಲ್ಲಿ ಹಲವರು ಜೀವ ಕಳೆದುಕೊಂಡಿದ್ದು, ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಬಾಲಸೋರ್ ರೈಲು ದುರಂತ ಘಟನೆ ಬಳಿಕವೂ ಕೇಂದ್ರ ಸರ್ಕಾರ ಸುರಕ್ಷತೆಯನ್ನು ಗಾಳಿಗೆ ತೂರಿದಂತಿದೆ. ಕೇಂದ್ರ ಸರ್ಕಾರ ಅಬ್ಬರ ಮತ್ತು ಪ್ರಚಾರಗಳೊಂದಿಗೆ ರೈಲುಗಳಿಗೆ ಚಾಲನೆ ನೀಡುವುದರಲ್ಲಿ ತೋರುವ ಉತ್ಸಾಹವನ್ನು ಸುರಕ್ಷತೆ ಒದಗಿಸುವುದರತ್ತಲೂ ತೋರಬೇಕು ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದಾರೆ.

andolanait

Recent Posts

ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…

13 mins ago

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

2 hours ago

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…

2 hours ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

3 hours ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

3 hours ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

3 hours ago