ರಾಷ್ಟ್ರೀಯ

ಕರ್ನಾಟಕದ ಶಿಲ್ಪಿ ಗಣೇಶ್‌ ಭಟ್‌ ಕೆತ್ತಿದ್ದ ರಾಮಲಲ್ಲಾ ಮೂರ್ತಿ ಫೋಟೊ ಬಹಿರಂಗ

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಈ ಮೂರ್ತಿಯನ್ನು ತಯಾರಿಸಿದ್ದರು ಎಂಬ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ.

ಇನ್ನು ರಾಮಮಂದಿರಕ್ಕಾಗಿ ರಾಮಲಲ್ಲಾ ಮೂರ್ತಿಗಳನ್ನು ಕೆತ್ತುವ ಕಾರ್ಯವನ್ನು ಮೂವರು ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಅರುಣ್‌ ಯೋಗಿರಾಜ್‌ ಕೆತ್ತಿದ ಮೂರ್ತಿಯನ್ನು ಪ್ರಾಣಪ್ರತಿಷ್ಠಾಪನೆ ಮಾಡಲು ಆಯ್ಕೆ ಮಾಡಲಾಗಿತ್ತು. ಹಾಗಿದ್ದರೆ ಇನ್ನುಳಿದ ಎರಡು ಮೂರ್ತಿಗಳು ಎಲ್ಲಿ ಎಂಬ ಪ್ರಶ್ನೆ ಹಾಗೂ ಕುತೂಹಲ ಜನರಲ್ಲಿ ಮೂಡಿತ್ತು.

ಈ ಎರಡು ವಿಗ್ರಹಗಳ ಪೈಕಿ ನಿನ್ನೆ ( ಜನವರಿ 23 ) ರಾಜಸ್ಥಾನದ ಜೈಪುರ ನಿವಾಸಿ ಸತ್ಯನಾರಾಯಣ ಪಾಂಡೆ ತಯಾರಿಸಿದ್ದ ರಾಮಲಲ್ಲಾ ಮೂರ್ತಿಯ ಫೋಟೊ ಹೊರಬಿದ್ದಿತ್ತು. ಇದೀಗ ಕರ್ನಾಟಕ ಮೂಲದ ಮತ್ತೋರ್ವ ಶಿಲ್ಪಿ ಗಣೇಶ್‌ ಭಟ್‌ ತಯಾರಿಸಿದ್ದ ರಾಮಲಲ್ಲಾ ಮೂರ್ತಿಯ ಫೋಟೊ ಸಹ ಹೊರಬಿದ್ದಿದೆ. ಈ ವಿಗ್ರಹದಲ್ಲಿ ರಾಮನ ಕಿರೀಟದಲ್ಲಿ ಸೂರ್ಯದೇವ ಹಾಗೂ ಸೂರ್ಯಚಕ್ರವಿದ್ದು, ವಿಗ್ರಹದ ಮೇಲೆ ಸಿಂಹದ ಲಲಾಟವನ್ನು ಕಾಣಬಹುದಾಗಿದೆ.

ಇನ್ನು ಈ ರಾಮಲಲ್ಲಾ ಮೂರ್ತಿ ಏಕಶಿಲಾ ಮೂರ್ತಿಯಾಗಿದ್ದು ಬಿಲ್ಲು ಹಾಗೂ ಬಾಣವನ್ನೂ ಸಹ ಒಳಗೊಂಡಿದೆ. ವಾಲ್ಮೀಕಿ ರಾಮಾಯಣದ ಪ್ರಕಾರ ಮುಖವನ್ನು ಕೆತ್ತಲಾಗಿದ್ದು, ಹೊಟ್ಟೆ ಮೃದುತ್ವವನ್ನು ಹೊಂದಿದೆ ಹಾಗೂ ಕಮಲದಳ ಪೀಠವಿದೆ. ಹೊಯ್ಸಳ ಶೈಲಿಯಲ್ಲಿದ್ದು ವಿಗ್ರಹದ ಪಕ್ಕದಲ್ಲಿ ಬ್ರಹ್ಮ, ಲಕ್ಷ್ಮಿ, ಹನುಮಂತ ಹಾಗೂ ಗರುಡ ದೇವರ ಕೆತ್ತನೆಗಳಿವೆ.

andolana

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago