ರಾಷ್ಟ್ರೀಯ

ಕರ್ನಾಟಕದ ಶಿಲ್ಪಿ ಗಣೇಶ್‌ ಭಟ್‌ ಕೆತ್ತಿದ್ದ ರಾಮಲಲ್ಲಾ ಮೂರ್ತಿ ಫೋಟೊ ಬಹಿರಂಗ

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಈ ಮೂರ್ತಿಯನ್ನು ತಯಾರಿಸಿದ್ದರು ಎಂಬ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ.

ಇನ್ನು ರಾಮಮಂದಿರಕ್ಕಾಗಿ ರಾಮಲಲ್ಲಾ ಮೂರ್ತಿಗಳನ್ನು ಕೆತ್ತುವ ಕಾರ್ಯವನ್ನು ಮೂವರು ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಅರುಣ್‌ ಯೋಗಿರಾಜ್‌ ಕೆತ್ತಿದ ಮೂರ್ತಿಯನ್ನು ಪ್ರಾಣಪ್ರತಿಷ್ಠಾಪನೆ ಮಾಡಲು ಆಯ್ಕೆ ಮಾಡಲಾಗಿತ್ತು. ಹಾಗಿದ್ದರೆ ಇನ್ನುಳಿದ ಎರಡು ಮೂರ್ತಿಗಳು ಎಲ್ಲಿ ಎಂಬ ಪ್ರಶ್ನೆ ಹಾಗೂ ಕುತೂಹಲ ಜನರಲ್ಲಿ ಮೂಡಿತ್ತು.

ಈ ಎರಡು ವಿಗ್ರಹಗಳ ಪೈಕಿ ನಿನ್ನೆ ( ಜನವರಿ 23 ) ರಾಜಸ್ಥಾನದ ಜೈಪುರ ನಿವಾಸಿ ಸತ್ಯನಾರಾಯಣ ಪಾಂಡೆ ತಯಾರಿಸಿದ್ದ ರಾಮಲಲ್ಲಾ ಮೂರ್ತಿಯ ಫೋಟೊ ಹೊರಬಿದ್ದಿತ್ತು. ಇದೀಗ ಕರ್ನಾಟಕ ಮೂಲದ ಮತ್ತೋರ್ವ ಶಿಲ್ಪಿ ಗಣೇಶ್‌ ಭಟ್‌ ತಯಾರಿಸಿದ್ದ ರಾಮಲಲ್ಲಾ ಮೂರ್ತಿಯ ಫೋಟೊ ಸಹ ಹೊರಬಿದ್ದಿದೆ. ಈ ವಿಗ್ರಹದಲ್ಲಿ ರಾಮನ ಕಿರೀಟದಲ್ಲಿ ಸೂರ್ಯದೇವ ಹಾಗೂ ಸೂರ್ಯಚಕ್ರವಿದ್ದು, ವಿಗ್ರಹದ ಮೇಲೆ ಸಿಂಹದ ಲಲಾಟವನ್ನು ಕಾಣಬಹುದಾಗಿದೆ.

ಇನ್ನು ಈ ರಾಮಲಲ್ಲಾ ಮೂರ್ತಿ ಏಕಶಿಲಾ ಮೂರ್ತಿಯಾಗಿದ್ದು ಬಿಲ್ಲು ಹಾಗೂ ಬಾಣವನ್ನೂ ಸಹ ಒಳಗೊಂಡಿದೆ. ವಾಲ್ಮೀಕಿ ರಾಮಾಯಣದ ಪ್ರಕಾರ ಮುಖವನ್ನು ಕೆತ್ತಲಾಗಿದ್ದು, ಹೊಟ್ಟೆ ಮೃದುತ್ವವನ್ನು ಹೊಂದಿದೆ ಹಾಗೂ ಕಮಲದಳ ಪೀಠವಿದೆ. ಹೊಯ್ಸಳ ಶೈಲಿಯಲ್ಲಿದ್ದು ವಿಗ್ರಹದ ಪಕ್ಕದಲ್ಲಿ ಬ್ರಹ್ಮ, ಲಕ್ಷ್ಮಿ, ಹನುಮಂತ ಹಾಗೂ ಗರುಡ ದೇವರ ಕೆತ್ತನೆಗಳಿವೆ.

andolana

Recent Posts

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

29 mins ago

ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ : ಓರ್ವ ಬಂಧನ

ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…

59 mins ago

ಯುವ ರೈತರ ಮದುವೆಯಾಗುವ ಯುವತಿಯರಿಗೆ 5 ಲಕ್ಷ ನೀಡಲಿ ; ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗೆ ಮನವಿ

ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…

1 hour ago

ಕಾಲುಜಾರಿ ನೀರಿನಲ್ಲಿ ಮುಳುಗಿ ಯುವಕ ಸಾವು

ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…

1 hour ago

ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್

ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…

1 hour ago

ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್‌ ; ರೈತರ ಆಕ್ರೋಶ

ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…

2 hours ago