ರಾಷ್ಟ್ರೀಯ

ಕರ್ನಾಟಕದ ಶಿಲ್ಪಿ ಗಣೇಶ್‌ ಭಟ್‌ ಕೆತ್ತಿದ್ದ ರಾಮಲಲ್ಲಾ ಮೂರ್ತಿ ಫೋಟೊ ಬಹಿರಂಗ

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಈ ಮೂರ್ತಿಯನ್ನು ತಯಾರಿಸಿದ್ದರು ಎಂಬ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ.

ಇನ್ನು ರಾಮಮಂದಿರಕ್ಕಾಗಿ ರಾಮಲಲ್ಲಾ ಮೂರ್ತಿಗಳನ್ನು ಕೆತ್ತುವ ಕಾರ್ಯವನ್ನು ಮೂವರು ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಅರುಣ್‌ ಯೋಗಿರಾಜ್‌ ಕೆತ್ತಿದ ಮೂರ್ತಿಯನ್ನು ಪ್ರಾಣಪ್ರತಿಷ್ಠಾಪನೆ ಮಾಡಲು ಆಯ್ಕೆ ಮಾಡಲಾಗಿತ್ತು. ಹಾಗಿದ್ದರೆ ಇನ್ನುಳಿದ ಎರಡು ಮೂರ್ತಿಗಳು ಎಲ್ಲಿ ಎಂಬ ಪ್ರಶ್ನೆ ಹಾಗೂ ಕುತೂಹಲ ಜನರಲ್ಲಿ ಮೂಡಿತ್ತು.

ಈ ಎರಡು ವಿಗ್ರಹಗಳ ಪೈಕಿ ನಿನ್ನೆ ( ಜನವರಿ 23 ) ರಾಜಸ್ಥಾನದ ಜೈಪುರ ನಿವಾಸಿ ಸತ್ಯನಾರಾಯಣ ಪಾಂಡೆ ತಯಾರಿಸಿದ್ದ ರಾಮಲಲ್ಲಾ ಮೂರ್ತಿಯ ಫೋಟೊ ಹೊರಬಿದ್ದಿತ್ತು. ಇದೀಗ ಕರ್ನಾಟಕ ಮೂಲದ ಮತ್ತೋರ್ವ ಶಿಲ್ಪಿ ಗಣೇಶ್‌ ಭಟ್‌ ತಯಾರಿಸಿದ್ದ ರಾಮಲಲ್ಲಾ ಮೂರ್ತಿಯ ಫೋಟೊ ಸಹ ಹೊರಬಿದ್ದಿದೆ. ಈ ವಿಗ್ರಹದಲ್ಲಿ ರಾಮನ ಕಿರೀಟದಲ್ಲಿ ಸೂರ್ಯದೇವ ಹಾಗೂ ಸೂರ್ಯಚಕ್ರವಿದ್ದು, ವಿಗ್ರಹದ ಮೇಲೆ ಸಿಂಹದ ಲಲಾಟವನ್ನು ಕಾಣಬಹುದಾಗಿದೆ.

ಇನ್ನು ಈ ರಾಮಲಲ್ಲಾ ಮೂರ್ತಿ ಏಕಶಿಲಾ ಮೂರ್ತಿಯಾಗಿದ್ದು ಬಿಲ್ಲು ಹಾಗೂ ಬಾಣವನ್ನೂ ಸಹ ಒಳಗೊಂಡಿದೆ. ವಾಲ್ಮೀಕಿ ರಾಮಾಯಣದ ಪ್ರಕಾರ ಮುಖವನ್ನು ಕೆತ್ತಲಾಗಿದ್ದು, ಹೊಟ್ಟೆ ಮೃದುತ್ವವನ್ನು ಹೊಂದಿದೆ ಹಾಗೂ ಕಮಲದಳ ಪೀಠವಿದೆ. ಹೊಯ್ಸಳ ಶೈಲಿಯಲ್ಲಿದ್ದು ವಿಗ್ರಹದ ಪಕ್ಕದಲ್ಲಿ ಬ್ರಹ್ಮ, ಲಕ್ಷ್ಮಿ, ಹನುಮಂತ ಹಾಗೂ ಗರುಡ ದೇವರ ಕೆತ್ತನೆಗಳಿವೆ.

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

1 hour ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago