ರಾಷ್ಟ್ರೀಯ

ಕರ್ನಾಟಕದ ಶಿಲ್ಪಿ ಗಣೇಶ್‌ ಭಟ್‌ ಕೆತ್ತಿದ್ದ ರಾಮಲಲ್ಲಾ ಮೂರ್ತಿ ಫೋಟೊ ಬಹಿರಂಗ

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಈ ಮೂರ್ತಿಯನ್ನು ತಯಾರಿಸಿದ್ದರು ಎಂಬ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ.

ಇನ್ನು ರಾಮಮಂದಿರಕ್ಕಾಗಿ ರಾಮಲಲ್ಲಾ ಮೂರ್ತಿಗಳನ್ನು ಕೆತ್ತುವ ಕಾರ್ಯವನ್ನು ಮೂವರು ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಅರುಣ್‌ ಯೋಗಿರಾಜ್‌ ಕೆತ್ತಿದ ಮೂರ್ತಿಯನ್ನು ಪ್ರಾಣಪ್ರತಿಷ್ಠಾಪನೆ ಮಾಡಲು ಆಯ್ಕೆ ಮಾಡಲಾಗಿತ್ತು. ಹಾಗಿದ್ದರೆ ಇನ್ನುಳಿದ ಎರಡು ಮೂರ್ತಿಗಳು ಎಲ್ಲಿ ಎಂಬ ಪ್ರಶ್ನೆ ಹಾಗೂ ಕುತೂಹಲ ಜನರಲ್ಲಿ ಮೂಡಿತ್ತು.

ಈ ಎರಡು ವಿಗ್ರಹಗಳ ಪೈಕಿ ನಿನ್ನೆ ( ಜನವರಿ 23 ) ರಾಜಸ್ಥಾನದ ಜೈಪುರ ನಿವಾಸಿ ಸತ್ಯನಾರಾಯಣ ಪಾಂಡೆ ತಯಾರಿಸಿದ್ದ ರಾಮಲಲ್ಲಾ ಮೂರ್ತಿಯ ಫೋಟೊ ಹೊರಬಿದ್ದಿತ್ತು. ಇದೀಗ ಕರ್ನಾಟಕ ಮೂಲದ ಮತ್ತೋರ್ವ ಶಿಲ್ಪಿ ಗಣೇಶ್‌ ಭಟ್‌ ತಯಾರಿಸಿದ್ದ ರಾಮಲಲ್ಲಾ ಮೂರ್ತಿಯ ಫೋಟೊ ಸಹ ಹೊರಬಿದ್ದಿದೆ. ಈ ವಿಗ್ರಹದಲ್ಲಿ ರಾಮನ ಕಿರೀಟದಲ್ಲಿ ಸೂರ್ಯದೇವ ಹಾಗೂ ಸೂರ್ಯಚಕ್ರವಿದ್ದು, ವಿಗ್ರಹದ ಮೇಲೆ ಸಿಂಹದ ಲಲಾಟವನ್ನು ಕಾಣಬಹುದಾಗಿದೆ.

ಇನ್ನು ಈ ರಾಮಲಲ್ಲಾ ಮೂರ್ತಿ ಏಕಶಿಲಾ ಮೂರ್ತಿಯಾಗಿದ್ದು ಬಿಲ್ಲು ಹಾಗೂ ಬಾಣವನ್ನೂ ಸಹ ಒಳಗೊಂಡಿದೆ. ವಾಲ್ಮೀಕಿ ರಾಮಾಯಣದ ಪ್ರಕಾರ ಮುಖವನ್ನು ಕೆತ್ತಲಾಗಿದ್ದು, ಹೊಟ್ಟೆ ಮೃದುತ್ವವನ್ನು ಹೊಂದಿದೆ ಹಾಗೂ ಕಮಲದಳ ಪೀಠವಿದೆ. ಹೊಯ್ಸಳ ಶೈಲಿಯಲ್ಲಿದ್ದು ವಿಗ್ರಹದ ಪಕ್ಕದಲ್ಲಿ ಬ್ರಹ್ಮ, ಲಕ್ಷ್ಮಿ, ಹನುಮಂತ ಹಾಗೂ ಗರುಡ ದೇವರ ಕೆತ್ತನೆಗಳಿವೆ.

andolana

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

55 mins ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

1 hour ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

2 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

2 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

3 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

3 hours ago