ರಾಷ್ಟ್ರೀಯ

ದೇಶದ ಅತಿ ಉದ್ದದ ಸಮುದ್ರ ಸೇತುವೆಗೆ ಜ.12 ರಂದು ಪಿಎಂ ಚಾಲನೆ

ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 12 ರಂದು ಉದ್ಘಾಟಿಸಲಿದ್ದಾರೆ.

ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಸೇತುವೆಯಲ್ಲಿ ಕಾರುಗಳಿಗೆ ಒಂದು ಸೈಡ್ ಗೆ 250 ರೂಪಾಯಿ ಟೋಲ್ ವಿಧಿಸುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.

ಒಟ್ಟು 21.8 ಕಿಮೀ ಉದ್ದದ ಈ ಸೇತುವೆ, ಅಧಿಕೃತವಾಗಿ ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುವೆಯನ್ನು 21,200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಈ ಸೇತುವೆ ರಾಯಗಢ ಜಿಲ್ಲೆಯ ಪನ್ವೆಲ್ ಮತ್ತು ದಕ್ಷಿಣ ಮಧ್ಯ ಮುಂಬೈನ ಸೆವ್ರಿ ನಡುವಿನ ಅಂತರವನ್ನು ಕಡಿಮೆಗೊಳಿಸುತ್ತದೆ ಮತ್ತು ಪ್ರಯಾಣದ ಸಮಯ ಸುಮಾರು ಎರಡು ಗಂಟೆಗಳಿಂದ 15 ರಿಂದ 20 ನಿಮಿಷಗಳಿಗೆ ಇಳಿಯಲಿದೆ ಎಂದು ಕ್ಯಾಬಿನೆಟ್ ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.

ಟೋಲ್ ಸಂಗ್ರಹ ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ, ಅರ್ಧದಷ್ಟು ಮೊತ್ತವನ್ನು ಮಾತ್ರ ವಿಧಿಸಲಾಗುತ್ತಿದೆ ಎಂದು ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರದ ಕುರಿತು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಯಾಣಿಕ ಕಾರಿಗೆ 250 ಏಕಮುಖ ಟೋಲ್ ವಿಧಿಸಲಾಗುವುದು. ಆದರೆ ಹಿಂದಿರುಗುವ ಪ್ರಯಾಣಕ್ಕೆ ಮತ್ತು ದೈನಂದಿನ ಮತ್ತು ಆಗಾಗ್ಗೆ ಪ್ರಯಾಣಿಕರಿಗೆ ಶುಲ್ಕಗಳು ವಿಭಿನ್ನವಾಗಿರುತ್ತವೆ ಎಂದು ಅಧಿಕಾರಿ ಹೇಳಿದ್ದಾರೆ.

andolanait

Recent Posts

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

6 mins ago

ಶಿಥಿಲಾವಸ್ಥೆಯಲ್ಲಿ ‘ದಲಿತ- ಗಾಂಧಿ’ ಶತಮಾನದ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಮಕ್ಕಳಲ್ಲಿ ಗಾಂಧೀಜಿ ಅವರ ಸರಳತೆ, ಸಹಿಷ್ಣುತೆ, ಸಮಾನತೆಯ ಚಿಂತನೆಗಳ ಅರಿವು…

10 mins ago

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

10 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

13 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

14 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

14 hours ago