ರಾಷ್ಟ್ರೀಯ

ದೇಶದ ಅತಿ ಉದ್ದದ ಸಮುದ್ರ ಸೇತುವೆಗೆ ಜ.12 ರಂದು ಪಿಎಂ ಚಾಲನೆ

ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 12 ರಂದು ಉದ್ಘಾಟಿಸಲಿದ್ದಾರೆ.

ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಸೇತುವೆಯಲ್ಲಿ ಕಾರುಗಳಿಗೆ ಒಂದು ಸೈಡ್ ಗೆ 250 ರೂಪಾಯಿ ಟೋಲ್ ವಿಧಿಸುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.

ಒಟ್ಟು 21.8 ಕಿಮೀ ಉದ್ದದ ಈ ಸೇತುವೆ, ಅಧಿಕೃತವಾಗಿ ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುವೆಯನ್ನು 21,200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಈ ಸೇತುವೆ ರಾಯಗಢ ಜಿಲ್ಲೆಯ ಪನ್ವೆಲ್ ಮತ್ತು ದಕ್ಷಿಣ ಮಧ್ಯ ಮುಂಬೈನ ಸೆವ್ರಿ ನಡುವಿನ ಅಂತರವನ್ನು ಕಡಿಮೆಗೊಳಿಸುತ್ತದೆ ಮತ್ತು ಪ್ರಯಾಣದ ಸಮಯ ಸುಮಾರು ಎರಡು ಗಂಟೆಗಳಿಂದ 15 ರಿಂದ 20 ನಿಮಿಷಗಳಿಗೆ ಇಳಿಯಲಿದೆ ಎಂದು ಕ್ಯಾಬಿನೆಟ್ ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.

ಟೋಲ್ ಸಂಗ್ರಹ ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ, ಅರ್ಧದಷ್ಟು ಮೊತ್ತವನ್ನು ಮಾತ್ರ ವಿಧಿಸಲಾಗುತ್ತಿದೆ ಎಂದು ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರದ ಕುರಿತು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಯಾಣಿಕ ಕಾರಿಗೆ 250 ಏಕಮುಖ ಟೋಲ್ ವಿಧಿಸಲಾಗುವುದು. ಆದರೆ ಹಿಂದಿರುಗುವ ಪ್ರಯಾಣಕ್ಕೆ ಮತ್ತು ದೈನಂದಿನ ಮತ್ತು ಆಗಾಗ್ಗೆ ಪ್ರಯಾಣಿಕರಿಗೆ ಶುಲ್ಕಗಳು ವಿಭಿನ್ನವಾಗಿರುತ್ತವೆ ಎಂದು ಅಧಿಕಾರಿ ಹೇಳಿದ್ದಾರೆ.

andolanait

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

46 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

20 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago