ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 12 ರಂದು ಉದ್ಘಾಟಿಸಲಿದ್ದಾರೆ.
ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಸೇತುವೆಯಲ್ಲಿ ಕಾರುಗಳಿಗೆ ಒಂದು ಸೈಡ್ ಗೆ 250 ರೂಪಾಯಿ ಟೋಲ್ ವಿಧಿಸುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.
ಒಟ್ಟು 21.8 ಕಿಮೀ ಉದ್ದದ ಈ ಸೇತುವೆ, ಅಧಿಕೃತವಾಗಿ ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುವೆಯನ್ನು 21,200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಈ ಸೇತುವೆ ರಾಯಗಢ ಜಿಲ್ಲೆಯ ಪನ್ವೆಲ್ ಮತ್ತು ದಕ್ಷಿಣ ಮಧ್ಯ ಮುಂಬೈನ ಸೆವ್ರಿ ನಡುವಿನ ಅಂತರವನ್ನು ಕಡಿಮೆಗೊಳಿಸುತ್ತದೆ ಮತ್ತು ಪ್ರಯಾಣದ ಸಮಯ ಸುಮಾರು ಎರಡು ಗಂಟೆಗಳಿಂದ 15 ರಿಂದ 20 ನಿಮಿಷಗಳಿಗೆ ಇಳಿಯಲಿದೆ ಎಂದು ಕ್ಯಾಬಿನೆಟ್ ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.
ಟೋಲ್ ಸಂಗ್ರಹ ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ, ಅರ್ಧದಷ್ಟು ಮೊತ್ತವನ್ನು ಮಾತ್ರ ವಿಧಿಸಲಾಗುತ್ತಿದೆ ಎಂದು ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರದ ಕುರಿತು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಯಾಣಿಕ ಕಾರಿಗೆ 250 ಏಕಮುಖ ಟೋಲ್ ವಿಧಿಸಲಾಗುವುದು. ಆದರೆ ಹಿಂದಿರುಗುವ ಪ್ರಯಾಣಕ್ಕೆ ಮತ್ತು ದೈನಂದಿನ ಮತ್ತು ಆಗಾಗ್ಗೆ ಪ್ರಯಾಣಿಕರಿಗೆ ಶುಲ್ಕಗಳು ವಿಭಿನ್ನವಾಗಿರುತ್ತವೆ ಎಂದು ಅಧಿಕಾರಿ ಹೇಳಿದ್ದಾರೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…