ನವದೆಹಲಿ: ಬುಧವಾರ ನಡೆದ ಸಂಸತ್ ಭವನದ ಭದ್ರತಾ ವೈಫಲ್ಯದ ಕುರಿತು ಇದೇ ಮೊಲದ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದಿದ್ದಾರೆ. ಇದೊಂದು ದುರದೃಷ್ಟಕರ ಮತ್ತು ಕಳವಳಕಾರಿ ಎಂದು ಪ್ರಧಾನಿ ಹೇಳಿದ್ದಾರೆ.
Dainik Jagran ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪದ ಕುರಿತು ಪ್ರಥಮ ಬಾರಿಗೆ ಮಾತನಾಡಿದ್ದಾರೆ.
ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಈ ಘಟನೆಯನ್ನು ತುಂಬಾ ಗಂಭೀರವಾಗಿ ಪರಿಗಣಿಸಿದಾರೆ ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದ ಮೋದಿ ತಿಳಿಸಿದ್ದಾರೆ.
ಈ ನಡುವೆ, ಸಂಸತ್ ಭವನದ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು. ಇದನ್ನು ತಿರಸ್ಕರಿಸಿರುವ ಲೋಕಸಭಾಧ್ಯಕ್ಷ ಓಂ ಬಿರ್ಲಾ, ಲೋಕಸಭೆಯೊಳಗಿನ ಭದ್ರತೆಯು ಲೋಕಸಭಾ ಕಾರ್ಯಾಲಯದಡಿ ಬರಲಿದ್ದು, ಅದರ ಮಧ್ಯಪ್ರವೇಶಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
“ಲೋಕಸಭಾ ಕಾರ್ಯಾಲಯದ ಹೊಣೆಗಾರಿಕೆಯ ನಡುವೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವಂತಿಲ್ಲ. ಅದಕ್ಕೆ ನಾವು ಅವಕಾಶವನ್ನೂ ನೀಡುವುದಿಲ್ಲ” ಎಂದು ವಿರೋಧ ಪಕ್ಷಗಳ ಘೋಷಣೆಗಳಿಗೆ ಪ್ರತಿಯಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಸ್ಪಷ್ಟನೆ ನೀಡಿದರು.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಆರು ಮಂದಿಯ ವಿರುದ್ಧ ಯುಎಪಿಎ ಕಾಯ್ದೆಯಡಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…