ಚೆನ್ನೈ: ಹಣ ಹಂಚಿಕೆ, ಅಭಿವೃದ್ಧಿ ಯೋಜನೆಗಳು ಮತ್ತು ರಾಜ್ಯದಲ್ಲಿ ನೀಟ್ ಅನ್ನು ನಿಷೇಧಿಸುವ ವಿಷಯದಲ್ಲಿ ತಮಿಳುನಾಡಿನ ವಿರುದ್ಧ ಕೇಂದ್ರ ತಾರತಮ್ಯ ಮಾಡಿದೆ. ಚುನಾವಣೆ ಹತ್ತಿರವಿರುವಾಗ ಮಾತ್ರ ಪ್ರಧಾನಿ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ ಎಂದು ಸಚಿವ ಉದಯ್ನಿಧಿ ಸ್ಟಾಲಿನ್ ಹೇಳಿದ್ದಾರೆ.
ಶನಿವಾರ(ಮಾ.23) ರಾಮನಾಥಪುರಂ ಮತ್ತು ಥೇಣಿಯಲ್ಲಿ ಪ್ರತ್ಯೇಕ ರ್ಯಾಲಿಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ನಿಧಿ ಹಂಚಿಕೆಯ ತಾರತಮ್ಯದ ವಿರುದ್ಧ ಉದಯನಿಧಿ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯವು ತೆರಿಗೆಯಾಗಿ ಪಾವತಿಸುವ ಪ್ರತಿ ರೂಪಾಯಿಗೆ ಕೇವಲ 28 ಪೈಸೆಗಳನ್ನು ಮಾತ್ರ ಕೇಂದ್ರ ರಾಜ್ಯಕ್ಕೆ ಪಾವತಿಸಿದೆ. ಬಿಜೆಪಿ ಆಡಳಿತದ ರಾಜ್ಯಗಳು ಇದಕ್ಕಿಂತ ಹೆಚ್ಚು ಹಣವನ್ನು ಪಡೆಯುತ್ತಿವೆ ಎಂದು ಆರೋಪಿಸಿರುವ ಅವರು, ಇನ್ಮುಂದೆ ನಾವು ಪ್ರಧಾನಿಯನ್ನು 28 ಪೈಸೆ ಪಿಎಂ ಎಂದು ಕರೆಯಬೇಕೆಂದು ವ್ಯಂಗ್ಯವಾಡಿದ್ದಾರೆ.
ತಮಿಳುನಾಡಿನಲ್ಲಿ ಒಟ್ಟು 39 ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ಎಲ್ಲಾ ಕ್ಷೇತ್ರಗಳಿಗೂ ಏಪ್ರಿಲ್ 19 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ತೀರ್ಪು ಬರಲಿದೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…