ರಾಷ್ಟ್ರೀಯ

ಪಕ್ಷ ಯಾವುದೇ ಇರಲಿ ರಾಷ್ಟ್ರ ಸೇವೆಯೇ ಪ್ರತಿ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು : ಮೋದಿ

ನವದೆಹಲಿ : ಯಾವುದೇ ಪಕ್ಷದವರಾಗಿರಲಿ ರಾಷ್ಟ್ರ ಸೇವೆ ಎಂಬುವುದು ಪ್ರತಿಯೊಬ್ಬ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು . ಜೊತೆಗೆ ಬೇರೆಯವರನ್ನ ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಸಲಹೆ ನೀಡಿದರು.

ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಎನ್‌ ಡಿಎ ಸಂಸದರ ಸಭೆ ನಡೆಸಿದ್ದಾರೆ.

೩ನೇ ಅವಧಿಗೆ ಚುನಾಯಿತರಾದ ಎನ್‌ ಡಿಎ ಸಂಸದರನ್ನುದ್ದೇಶಿಸಿ ಮಾಡಿದ ಮೊಲದ ಭಾಷಣದಲ್ಲಿ ನೂತನ ಸಂಸದರಿಗೆ ಮೋದಿ, ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದರು. ಕಲಿಯಲು ಸಂಸತ್‌ ನಲ್ಲಿ ಉತ್ತಮ ಸ್ಥಳವಿಲ್ಲ ಮಹಾನ್‌ ಪ್ರಯಾಣದ ಬಗ್ಗೆ ತಿಳಿಯಲು ಮತ್ತು ಅವರ ಅನುಭವದಿಂದ ಕಲಿಯಲು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ  ಭೇಟಿ ನೀಡಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ ಎನ್ನಲಾಗಿದೆ.

ಅಲ್ಲದೆ ಸಂಸದರು ದೇಶ ಸೇವೆ ಮಾಡಲು ಇಲ್ಲಿಗೆ ಬಂದಿದ್ದಾರೆ ಮತ್ತು ರಾಷ್ಟ್ರವನ್ನು ಯಾವಾಗಲೂ ಮೊದಲ ಸ್ಥಾನದಲ್ಲಿರಿಸಲು ಎಲ್ಲರಿಗೂ ಸಲಹೆ ನೀಡಿದ್ದಾರೆ. ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವ ಮೊದಲು ಅದನ್ನ ಅಧ್ಯಯನ ಮಾಡುವಂತೆ, ಸಂಸದರು ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು ಹಾಗೂ ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವಂತೆ ಕಿವಿಮಾತು ಹೇಳಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಿಂದ ಬಂತು ಇನ್ನೊಂದು ಹಾಡು; ಈ ಬಾರಿ ಆನೆಯಿಂದ ಬಿಡುಗಡೆ

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು…

7 mins ago

ಯಶ್‍ಗೆ ಮಾಡಿದ ಕಥೆ ಈಗ ಪುನೀತ್‍ ಹೆಸರಲ್ಲಿ ಪ್ರಾರಂಭ

ಪುನೀತ್‍ ರಾಜಕುಮಾರ್‍ ನೆನಪಲ್ಲಿ ಸೆಟ್ಟೇರುತ್ತಿರುವ ಚಿತ್ರಗಳ ಸಂಖ್ಯೆ ಹೆಚ್ಚುತ್ತಿದೆ. ‘ಅಪ್ಪು ಅಭಿಮಾನಿ’, ‘ಪುನೀತ್‍ ನಿವಾಸ’, ‘ಅಪ್ಪು ಟ್ಯಾಕ್ಸಿ’ ನಂತರ ಇದೀಗ…

15 mins ago

ದಶಕದ ಬಳಿಕ ಮತ್ತೆ ನಿರ್ದೇಶಕರಾದ ಅರಸು ಅಂತಾರೆ

ಸತೀಶ್‍ ನೀನಾಸಂ ಅಭಿನಯದ ‘ಲವ್‍ ಇನ್‍ ಮಂಡ್ಯ’ ಚಿತ್ರದ ಮೂಲಕ ನಿರ್ದೇಶಕರಾದವರು ಅರಸು ಅಂತಾರೆ. ಒಂದು ಚಿತ್ರ ಮಾಡಿ ನಿರ್ದೇಶನದಿಂದ…

21 mins ago

ಎಚ್.ಡಿ.ಕೋಟೆ| ತಾಲ್ಲೂಕು ಆರೋಗ್ಯ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ

ಎಚ್.ಡಿ.ಕೋಟೆ: ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ…

34 mins ago

ಚಲುವರಾಯಸ್ವಾಮಿಗೆ ಇರುವ ಚಟಗಳು ನನಗೆ ಇಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿಕೊಂಡು ಶಾಸಕರು ಬಂದ್ರಾ? ಅಥವಾ ನನ್ನನ್ನು ನೋಡಿಕೊಂಡು ಬಂದರಾ? ಅನ್ನೋದಕ್ಕೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ…

48 mins ago

ಯತ್ನಾಳ್‌ ರಕ್ಷಣೆಗೆ ಹಿಂದುತ್ವದ ಗುರಾಣಿ ಬಳಕೆ: ಎಂಪಿ ರೇಣುಕಾಚಾರ್ಯ

ದಾವಣಗೆರೆ: ಬಸನಗೌಡ ಪಾಟೀಲ್‌ ಯತ್ನಾಳ್‌ ತಮ್ಮ ರಕ್ಷಣೆಗಾಗಿ ಹಿಂದುತ್ವ ಎಂಬ ಗುರಾಣಿಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ…

53 mins ago