ನವದೆಹಲಿ : ಯಾವುದೇ ಪಕ್ಷದವರಾಗಿರಲಿ ರಾಷ್ಟ್ರ ಸೇವೆ ಎಂಬುವುದು ಪ್ರತಿಯೊಬ್ಬ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು . ಜೊತೆಗೆ ಬೇರೆಯವರನ್ನ ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಸಲಹೆ ನೀಡಿದರು.
ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಎನ್ ಡಿಎ ಸಂಸದರ ಸಭೆ ನಡೆಸಿದ್ದಾರೆ.
೩ನೇ ಅವಧಿಗೆ ಚುನಾಯಿತರಾದ ಎನ್ ಡಿಎ ಸಂಸದರನ್ನುದ್ದೇಶಿಸಿ ಮಾಡಿದ ಮೊಲದ ಭಾಷಣದಲ್ಲಿ ನೂತನ ಸಂಸದರಿಗೆ ಮೋದಿ, ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದರು. ಕಲಿಯಲು ಸಂಸತ್ ನಲ್ಲಿ ಉತ್ತಮ ಸ್ಥಳವಿಲ್ಲ ಮಹಾನ್ ಪ್ರಯಾಣದ ಬಗ್ಗೆ ತಿಳಿಯಲು ಮತ್ತು ಅವರ ಅನುಭವದಿಂದ ಕಲಿಯಲು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ ಎನ್ನಲಾಗಿದೆ.
ಅಲ್ಲದೆ ಸಂಸದರು ದೇಶ ಸೇವೆ ಮಾಡಲು ಇಲ್ಲಿಗೆ ಬಂದಿದ್ದಾರೆ ಮತ್ತು ರಾಷ್ಟ್ರವನ್ನು ಯಾವಾಗಲೂ ಮೊದಲ ಸ್ಥಾನದಲ್ಲಿರಿಸಲು ಎಲ್ಲರಿಗೂ ಸಲಹೆ ನೀಡಿದ್ದಾರೆ. ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವ ಮೊದಲು ಅದನ್ನ ಅಧ್ಯಯನ ಮಾಡುವಂತೆ, ಸಂಸದರು ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು ಹಾಗೂ ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವಂತೆ ಕಿವಿಮಾತು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…