ರಾಷ್ಟ್ರೀಯ

ಪಕ್ಷ ಯಾವುದೇ ಇರಲಿ ರಾಷ್ಟ್ರ ಸೇವೆಯೇ ಪ್ರತಿ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು : ಮೋದಿ

ನವದೆಹಲಿ : ಯಾವುದೇ ಪಕ್ಷದವರಾಗಿರಲಿ ರಾಷ್ಟ್ರ ಸೇವೆ ಎಂಬುವುದು ಪ್ರತಿಯೊಬ್ಬ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು . ಜೊತೆಗೆ ಬೇರೆಯವರನ್ನ ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಸಲಹೆ ನೀಡಿದರು.

ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಎನ್‌ ಡಿಎ ಸಂಸದರ ಸಭೆ ನಡೆಸಿದ್ದಾರೆ.

೩ನೇ ಅವಧಿಗೆ ಚುನಾಯಿತರಾದ ಎನ್‌ ಡಿಎ ಸಂಸದರನ್ನುದ್ದೇಶಿಸಿ ಮಾಡಿದ ಮೊಲದ ಭಾಷಣದಲ್ಲಿ ನೂತನ ಸಂಸದರಿಗೆ ಮೋದಿ, ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದರು. ಕಲಿಯಲು ಸಂಸತ್‌ ನಲ್ಲಿ ಉತ್ತಮ ಸ್ಥಳವಿಲ್ಲ ಮಹಾನ್‌ ಪ್ರಯಾಣದ ಬಗ್ಗೆ ತಿಳಿಯಲು ಮತ್ತು ಅವರ ಅನುಭವದಿಂದ ಕಲಿಯಲು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ  ಭೇಟಿ ನೀಡಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ ಎನ್ನಲಾಗಿದೆ.

ಅಲ್ಲದೆ ಸಂಸದರು ದೇಶ ಸೇವೆ ಮಾಡಲು ಇಲ್ಲಿಗೆ ಬಂದಿದ್ದಾರೆ ಮತ್ತು ರಾಷ್ಟ್ರವನ್ನು ಯಾವಾಗಲೂ ಮೊದಲ ಸ್ಥಾನದಲ್ಲಿರಿಸಲು ಎಲ್ಲರಿಗೂ ಸಲಹೆ ನೀಡಿದ್ದಾರೆ. ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವ ಮೊದಲು ಅದನ್ನ ಅಧ್ಯಯನ ಮಾಡುವಂತೆ, ಸಂಸದರು ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು ಹಾಗೂ ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವಂತೆ ಕಿವಿಮಾತು ಹೇಳಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

3 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

4 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

5 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

7 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

8 hours ago