ರಾಷ್ಟ್ರೀಯ

ಪಂಜಾಬ್‌ನಲ್ಲಿ ಪಿಎಂ ಭದ್ರತಾ ಲೋಪ: ಏಳು ಮಂದಿ ಪೊಲೀಸರ ಅಮಾನತ್ತು

ಪಂಜಾಬ್‌: ಕಳೆದ ವರ್ಷ ಪಂಜಾಬ್‌ನಲ್ಲಿ ರಸ್ತೆ ಮೂಲಕ ತೆರಳುತ್ತಿದ್ದ ವೇಳೆ  ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆ ಲೋಪಗಳ ಹಿನ್ನೆಲೆಯಲ್ಲಿ ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಫೆಬ್ರವರಿ ೫ 2022 ರಂದು ಪ್ರಧಾನಿ ನರೇಂದ್ರ ಮೋದಿ ಬಂಜಾಬ್‌ನ ಬಟಿಂಡಾದಿಂದ ರಸ್ತೆ ಮೂಲಕ ಫಿರೋಜ್‌ಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ರೈತರು ರಸ್ತೆ ತಡೆ ನಡೆಸಿದರು. ಹೀಗಾಗಿ ಪ್ರಧಾನಿ ಮೋದಿಯವರ ವಾಹನವನ್ನು ಅವರ ಬೆಂಗಾವಲು ಪಡೆ ಸುಮಾರು 20 ನಿಮಿಷಗಳ ಕಾಲ ಫಿರೋಜ್‌ಪುರದ ಪ್ಯಾರಾನಾ ಮೇಲ್ಸೇತುವೆಯಲ್ಲಿ ನಿಲ್ಲಿಸಬೇಕಾಯಿತು.

ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಪಣಜಾಬ್‌ ಮುಖ್ಯಮಂತ್ರಿಗೆ ಪತ್ರ ಬರೆಯಲಾಯಿತು. ಪತ್ರ ಬರೆದು ಸುಮಾರು ಒಂದು ವರ್ಷದ ಬಳಿಕೆ ಬಂಜಾಬ್‌ ಸರ್ಕಾರ ತನಿಖೆ ಕೈಗೊಳ್ಳುವ ಮೂಲಕ ಏಳು ಮಂದಿ ಪೊಲೀಸರನ್ನು ಅಮಾನತ್ತುಗೊಳಿಸಿದ್ದಾರೆ.

ಇದರಲ್ಲಿ ಬಟಿಂಡಾ ಎಸ್‌ಪಿ ಗುರ್ಬಿಂದರ್ ಸಿಂಗ್, ಡಿಎಸ್‌ಪಿ ಪರ್ಸನ್ ಸಿಂಗ್, ಡಿಎಸ್‌ಪಿ ಜಗದೀಶ್ ಕುಮಾರ್, ಇನ್‌ಸ್ಪೆಕ್ಟರ್ ತೇಜಿಂದರ್ ಸಿಂಗ್, ಇನ್‌ಸ್ಪೆಕ್ಟರ್ ಬಲ್ವಿಂದರ್ ಸಿಂಗ್, ಇನ್‌ಸ್ಪೆಕ್ಟರ್ ಜತೀಂದರ್ ಸಿಂಗ್ ಮತ್ತು ಎಎಸ್‌ಐ ರಾಕೇಶ್ ಕುಮಾರ್ ಅವರ ಹೆಸರುಗಳಿವೆ.

andolanait

Recent Posts

ಇನ್ನೊಂದು ವಾರದೊಳಗೆ ಸಿಎಂ ನಿವಾಸ ಖಾಲಿ ಮಾಡಲಿರುವ ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ.…

3 mins ago

ಶೋಭಾ ಕರಂದ್ಲಾಜೆ ಹಾಗೂ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌

ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.…

6 mins ago

ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಅಸಾದುದ್ದೀನ್ ಓವೈಸಿ ಕಿಡಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

14 mins ago

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…

18 mins ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago