ರಾಷ್ಟ್ರೀಯ

ಪಂಜಾಬ್‌ನಲ್ಲಿ ಪಿಎಂ ಭದ್ರತಾ ಲೋಪ: ಏಳು ಮಂದಿ ಪೊಲೀಸರ ಅಮಾನತ್ತು

ಪಂಜಾಬ್‌: ಕಳೆದ ವರ್ಷ ಪಂಜಾಬ್‌ನಲ್ಲಿ ರಸ್ತೆ ಮೂಲಕ ತೆರಳುತ್ತಿದ್ದ ವೇಳೆ  ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆ ಲೋಪಗಳ ಹಿನ್ನೆಲೆಯಲ್ಲಿ ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಫೆಬ್ರವರಿ ೫ 2022 ರಂದು ಪ್ರಧಾನಿ ನರೇಂದ್ರ ಮೋದಿ ಬಂಜಾಬ್‌ನ ಬಟಿಂಡಾದಿಂದ ರಸ್ತೆ ಮೂಲಕ ಫಿರೋಜ್‌ಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ರೈತರು ರಸ್ತೆ ತಡೆ ನಡೆಸಿದರು. ಹೀಗಾಗಿ ಪ್ರಧಾನಿ ಮೋದಿಯವರ ವಾಹನವನ್ನು ಅವರ ಬೆಂಗಾವಲು ಪಡೆ ಸುಮಾರು 20 ನಿಮಿಷಗಳ ಕಾಲ ಫಿರೋಜ್‌ಪುರದ ಪ್ಯಾರಾನಾ ಮೇಲ್ಸೇತುವೆಯಲ್ಲಿ ನಿಲ್ಲಿಸಬೇಕಾಯಿತು.

ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಪಣಜಾಬ್‌ ಮುಖ್ಯಮಂತ್ರಿಗೆ ಪತ್ರ ಬರೆಯಲಾಯಿತು. ಪತ್ರ ಬರೆದು ಸುಮಾರು ಒಂದು ವರ್ಷದ ಬಳಿಕೆ ಬಂಜಾಬ್‌ ಸರ್ಕಾರ ತನಿಖೆ ಕೈಗೊಳ್ಳುವ ಮೂಲಕ ಏಳು ಮಂದಿ ಪೊಲೀಸರನ್ನು ಅಮಾನತ್ತುಗೊಳಿಸಿದ್ದಾರೆ.

ಇದರಲ್ಲಿ ಬಟಿಂಡಾ ಎಸ್‌ಪಿ ಗುರ್ಬಿಂದರ್ ಸಿಂಗ್, ಡಿಎಸ್‌ಪಿ ಪರ್ಸನ್ ಸಿಂಗ್, ಡಿಎಸ್‌ಪಿ ಜಗದೀಶ್ ಕುಮಾರ್, ಇನ್‌ಸ್ಪೆಕ್ಟರ್ ತೇಜಿಂದರ್ ಸಿಂಗ್, ಇನ್‌ಸ್ಪೆಕ್ಟರ್ ಬಲ್ವಿಂದರ್ ಸಿಂಗ್, ಇನ್‌ಸ್ಪೆಕ್ಟರ್ ಜತೀಂದರ್ ಸಿಂಗ್ ಮತ್ತು ಎಎಸ್‌ಐ ರಾಕೇಶ್ ಕುಮಾರ್ ಅವರ ಹೆಸರುಗಳಿವೆ.

andolanait

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

18 mins ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

39 mins ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

43 mins ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

2 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

3 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

4 hours ago