ನವದೆಹಲಿ: ಶಾರುಖ್ ಖಾನ್ ಅಭಿನಯದ ‘ಡಂಕಿ’ ಚಿತ್ರ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ವಿಶ್ವದಾದ್ಯಂತ ರಿಲೀಸ್ ಆಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಬೆಂಬಲ ವ್ಯಕ್ತವಾಗುತ್ತಿದ್ದು, ಗಳಿಕೆಯಲ್ಲಿ ನಿರೀಕ್ಷೆಗೂ ಮೀರಿ ಲಾಭ ಮಾಡುವ ಸಾಧ್ಯತೆ ಇದೆ.
ಈ ಹಿಂದೆ ಸತತ ಸೋಲುಗಳಿಂದ ಕಂಗೆಟ್ಟಿದ್ದ ಶಾರುಖ್ ಖಾನ್ ಗೆ ಜವಾನ್, ಪಠಾಣ್ ಚಿತ್ರಗಳು ಭರ್ಜರಿ ಯಶಸ್ಸು ತಂದು ಕೊಟ್ಟಿದ್ದು, ಮತ್ತೆ ಗೆಲುವಿನ ಲಯಕ್ಕೆ ತಂದು ನಿಲ್ಲಿಸಿದೆ. ‘ಡಂಕಿ’ ಚಿತ್ರ ಕೂಡಾ ಯಶಸ್ಸು ಗಳಿಸಬಹುದು ಎಂಬ ಲೆಕ್ಕಾಚಾರ ಬಾಲಿವುಡ್ ಚಿತ್ರರಂಗದಲ್ಲಿ ವ್ಯಕ್ತವಾಗುತ್ತಿದೆ.
ಇದರ ಮಧ್ಯೆ ಅಕ್ರಮ ವಲಸೆ ಹಾಗೂ ದೇಶದ ಬಗೆಗಿನ ಪ್ರೀತಿಯನ್ನು ಹೊಂದಿರುವ ಈ ಚಿತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ವೀಕ್ಷಿಸಿದ್ದಾರೆ. ಭಾನುವಾರದಂದು ರಾಷ್ಟ್ರಪತಿ ಭವನದಲ್ಲಿ ಈ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದ್ದು, ಚಿತ್ರ ವೀಕ್ಷಿಸಿದ ರಾಷ್ಟ್ರಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…