ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಅಗಿರುವ ಈ ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿರುವ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.
ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಭೋದಿಸಿದೆ.
ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…